ಮುಂಬೈ: ಪತ್ನಿ ಹಾಗೂ ತಮ್ಮ ಮೇಲೆ ಇಬ್ಬರು ಅಪರಿಚಿತರು ಗುರುವಾರ ಮುಂಜಾನೆ ದಾಳಿ ನಡೆಸಿರುವುದಾಗಿ ರಿಪಬ್ಲಿಕ್ ಟಿ.ವಿ ಸಂಪಾದಕ ಅರ್ನಾಬ್ಗೋಸ್ವಾಮಿ ಅವರು ಪೊಲೀಸರಿಗೆ ದೂರು ನೀಡಿದ್ದಾರೆ.
ಸ್ಟುಡಿಯೋದಿಂದ ಮುಂಬೈನ ನಿವಾಸಕ್ಕೆ ತೆರಳುತ್ತಿದ್ದಾಗ ಇಬ್ಬರು ಅಪರಿಚಿತರು ದಾಳಿ ನಡೆಸಿರುವುದಾಗಿಯೂ, ಘಟನೆಯಲ್ಲಿ ಅರ್ನಾಬ್ ಮತ್ತು ಪತ್ನಿಗೆ ಯಾವುದೇ ಗಾಯಗಳಾಗಿಲ್ಲಎಂದುರಾಷ್ಟ್ರೀಯ ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ.
ಅರ್ನಾಬ್ ದೂರಿನ ಮೇರೆಗೆ ಪೊಲೀಸರು ಇಬ್ಬರನ್ನು ಬಂಧಿಸಿದ್ದಾರೆ.
ಮಹಾರಾಷ್ಟ್ರದ ಪಾಲ್ಗರ್ನಲ್ಲಿ ಇತ್ತೀಚೆಗೆ ನಡೆದಿದ್ದ ಗುಂಪು ಹಲ್ಲೆಯಲ್ಲಿ ಇಬ್ಬರು ಸಾಧುಗಳು ದುರ್ಮರಣಕ್ಕೀಡಾದ ವಿಚಾರದ ಮೇಲಿನ ಟಿ.ವಿ ಚರ್ಚೆಯ ವೇಳೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಹೆಸರನ್ನು ಅರ್ನಾಬ್ ಉಲ್ಲೇಕಿಸಿದ್ದರು. ಇದೇ ವಿಚಾರವಾಗಿ ಕಾಂಗ್ರೆಸ್ ನಾಯಕರು ಅರ್ನಬ್ ಅವರ ವಿರುದ್ಧ ದೂರು ನೀಡಿದ್ದು, ಎಫ್ಐಆರ್ ಕೂಡ ದಾಖಲಾಗಿದೆ. ಹೀಗಿರುವಾಗಲೇ ತಮ್ಮ ಮೇಲೆ ದಾಳಿ ಪ್ರಯತ್ನ ನಡೆದಿದೆ ಎಂದು ಅರ್ನಾಬ್ ಅವರು ಆರೋಪಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.