ಕೋಲ್ಕತ್ತ: ಪಶ್ಚಿಮ ಬಂಗಾಳದ ಶಾಸಕ ಸ್ಥಾನಕ್ಕೆ ತಾವು ನೀಡಿದ್ದ ರಾಜೀನಾಮೆಯನ್ನು ಸ್ಪೀಕರ್ ಬಿಮನ್ ಬ್ಯಾನರ್ಜಿ ಅವರು ಅಂಗೀಕರಿಸಿದ್ದಾರೆ ಎಂದು ಬಿಜೆಪಿಗೆ ಸೇರ್ಪಡೆಯಾದ ಸುವೇಂದು ಅಧಿಕಾರಿ ಅವರು ತಿಳಿಸಿದರು.
‘ಸೋಮವಾರ ನಾನು ಸ್ಪೀಕರ್ ಅವರನ್ನು ಭೇಟಿಯಾದೆ. ಈ ವೇಳೆ ಅವರು ನನ್ನ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ’ ಎಂಬುದಾಗಿ ತಿಳಿಸಿದರು ಎಂದು ಸುವೇಂದು ಅಧಿಕಾರಿ ಅವರು ಮಾಹಿತಿ ನೀಡಿದರು.
ಟಿಎಂಸಿಯ ಸುವೇಂದು ಅಧಿಕಾರಿ ಅವರು ಕಳೆದ ವಾರ ತಮ್ಮ ಎಲ್ಲಾ ಸ್ಥಾನಗಳಿಗೆ ರಾಜೀನಾಮೆ ನೀಡಿ, ಈಚೆಗೆ ಬಿಜೆಪಿಗೆ ಸೇರ್ಪಡೆಯಾದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.