ADVERTISEMENT

ಹಿರಿಯರಿಗೆ ಗೌರವ ಕೊಡಬೇಕು: ಅಣ್ಣನಿಗೆ ಬುದ್ಧಿ ಹೇಳಿದ ಆರ್‌ಜೆಡಿ ನಾಯಕ ತೇಜಸ್ವಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 21 ಆಗಸ್ಟ್ 2021, 6:21 IST
Last Updated 21 ಆಗಸ್ಟ್ 2021, 6:21 IST
ತೇಜ್‌ ಪ್ರತಾಪ್‌ ಮತ್ತು ತೇಜಶ್ವಿ ಯಾದವ್
ತೇಜ್‌ ಪ್ರತಾಪ್‌ ಮತ್ತು ತೇಜಶ್ವಿ ಯಾದವ್    

ಪಟ್ನಾ: ತೇಜ್‌ ಪ್ರತಾಪ್‌ ಯಾದವ್‌ ಶಿಸ್ತಿನಿಂದ ವರ್ತಿಸಬೇಕು, ಹಿರಿಯರಿಗೆ ಗೌರವ ಕೊಡಬೇಕು ಎಂದು ರಾಷ್ಟ್ರೀಯ ಜನತಾದಳದ (ಆರ್‌ಜೆಡಿ) ನಾಯಕ ತೇಜಸ್ವಿ ಯಾದವ್ ಅಣ್ಣನಿಗೆ ಕಿವಿಮಾತು ಹೇಳಿದ್ದಾರೆ.

‘ನಮ್ಮದು ಶಿಸ್ತಿನ ಕುಟುಂಬ, ನಮ್ಮ ತಂದೆ ತಾಯಿ ಒಳ್ಳೆಯ ಸಂಸ್ಕೃತಿ ಮತ್ತು ಉತ್ತಮ ನಡವಳಿಕೆಯನ್ನು ಕಲಿಸಿಕೊಟ್ಟಿದ್ದಾರೆ, ತೇಜ್‌ ಪ್ರತಾಪ್‌ ಉತ್ತಮ ನಡವಳಿಕೆಯನ್ನು ರೂಢಿಸಿಕೊಳ್ಳಬೇಕು’ ಎಂದು ಹೇಳಿದ್ದಾರೆ.

ತೇಜ್‌ ಪ್ರತಾಪ್‌ ವರ್ತನೆ ಬಗ್ಗೆ ತಂದೆ ಲಾಲು ಪ್ರಸಾದ್‌ ಯಾದವ್‌ ಹಾಗೂ ತಾಯಿ ರಾಬ್ಡಿ ದೇವಿ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ADVERTISEMENT

ಇತ್ತೀಚೆಗೆ ತೇಜ್ ಪ್ರತಾಪ್‌ ರಾಷ್ಟ್ರೀಯ ಜನತಾ ದಳದ ಹಿರಿಯ ನಾಯಕ ಜಗದಾನಂದ ಸಿಂಗ್‌ ಅವರ ಜತೆ ಅನುಚಿತವಾಗಿ ವರ್ತಿಸಿದ್ದರು. ಅಣ್ಣನ ನಡೆಯ ಬಗ್ಗೆ ತೇಜಸ್ವಿ ಯಾದವ್‌ ಕೂಡ ಬೇಸರ ವ್ಯಕ್ತಪಡಿಸಿದ್ದರು.

ಶನಿವಾರ ಪಟ್ನಾದಲ್ಲಿ ತೇಜ್‌ ಪ್ರತಾಪ್‌ ತಮ್ಮನನ್ನು ಭೇಟಿ ಮಾಡಲು ಅವರ ನಿವಾಸಕ್ಕೆ ತೆರಳಿದ್ದರು. ಆದರೆ ತೇಜಸ್ವಿ ಯಾದವ್ ಭೇಟಿಗೆ ನಿರಾಕರಿಸಿದರು ಎಂದು ಆರ್‌ಜೆಡಿ ಮೂಲಗಳು ತಿಳಿಸಿವೆ.

ಆರ್‌ಜೆಡಿಯ ಯುವ ಘಟಕದ ಅಧ್ಯಕ್ಷರ ನೇಮಕಾತಿ ಸಂಬಂಧ ಸಹೋದರರಲ್ಲಿ ಒಡಕು ಮೂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.