ADVERTISEMENT

ತೆಲಂಗಾಣ: ಬಿಜೆಪಿ ಮುಖಂಡ ಸಂತೋಷ್‌ ವಿರುದ್ಧದ ನೋಟಿಸ್‌ಗೆ ಹೈಕೋರ್ಟ್ ತಡೆ

​ಪ್ರಜಾವಾಣಿ ವಾರ್ತೆ
Published 25 ನವೆಂಬರ್ 2022, 16:33 IST
Last Updated 25 ನವೆಂಬರ್ 2022, 16:33 IST
   

ಹೈದರಾಬಾದ್: ಭಾರತ ರಾಷ್ಟ್ರಸಮಿತಿ (ಬಿಆರ್‌ಎಸ್‌) ಶಾಸಕರನ್ನು ಖರೀದಿಸಲು ಯತ್ನಿಸಲಾಗಿತ್ತು ಎಂಬ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ (ಸಂಘಟನೆ) ಬಿ.ಎಲ್‌.ಸಂತೋಷ್‌ ಅವರಿಗೆ ಶುಕ್ರವಾರ ತಾತ್ಕಾಲಿಕ ಪರಿಹಾರ ಸಿಕ್ಕಿದೆ.

ಈ ಪ್ರಕರಣಕ್ಕೆ ಸಂಬಂಧಿಸಿ ವಿಚಾರಣೆಗಾಗಿ ತನ್ನ ಮುಂದೆ ಹಾಜರಾಗುವಂತೆ ಸಂತೋಷ್‌ ಅವರಿಗೆ ಎಸ್‌ಐಟಿ ನೀಡಿದ್ದ ನೋಟಿಸ್‌ಗಳಿಗೆ ತಡೆ ನೀಡಿದ ತೆಲಂಗಾಣ ಹೈಕೋರ್ಟ್‌, ವಿಚಾರಣೆಯನ್ನು ಡಿ.5ಕ್ಕೆ ಮುಂದೂಡಿತು.

ತಮಗೆ ಎಸ್‌ಐಟಿ ಎರಡನೇ ನೋಟಿಸ್‌ ನೀಡಿರುವುದನ್ನು ಪ್ರಶ್ನಿಸಿ ಸಂತೋಷ್‌ ಅವರು ಹೈಕೋರ್ಟ್‌ ಮೆಟ್ಟಿಲೇರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.