ADVERTISEMENT

ಜಮ್ಮು-ಕಾಶ್ಮೀರದ ಕೆಲವೆಡೆ ಮತ್ತೆ ನಿರ್ಬಂಧ: ಮೊಬೈಲ್, ಇಂಟರ್‌ನೆಟ್‌ ಸೇವೆ ಸ್ಥಗಿತ

ಪಿಟಿಐ
Published 4 ಸೆಪ್ಟೆಂಬರ್ 2021, 7:33 IST
Last Updated 4 ಸೆಪ್ಟೆಂಬರ್ 2021, 7:33 IST
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಶಾ ಗಿಲಾನಿ ನಿಧನದ ನಂತರ ಪೊಲೀಸರು ಶ್ರೀನಗರದ ಕೆಲವು ಕಡೆ ರಸ್ತೆಗಳನ್ನು ಬಂದ್ ಮಾಡುತ್ತಿರುವುದು.
ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಶಾ ಗಿಲಾನಿ ನಿಧನದ ನಂತರ ಪೊಲೀಸರು ಶ್ರೀನಗರದ ಕೆಲವು ಕಡೆ ರಸ್ತೆಗಳನ್ನು ಬಂದ್ ಮಾಡುತ್ತಿರುವುದು.   

ಶ್ರೀನಗರ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕ ಸೈಯದ್ ಅಲಿ ಶಾ ಗಿಲಾನಿ ಅವರ ನಿಧನದ ನಂತರ ಸಂಭಾವ್ಯ ಅಹಿತಕರ ಘಟನೆಗಳನ್ನು ತಡೆಯುವುದಕ್ಕಾಗಿ ಜಮ್ಮು–ಕಾಶ್ಮೀರದಲ್ಲಿ ಜನರು ಗುಂಪು ಸೇರುವುದನ್ನು ನಿರ್ಬಂಧಿಸಲಾಗಿದ್ದು, ಮೊಬೈಲ್ ಫೋನ್, ಇಂಟರ್ನೆಟ್‌ ಸೇವೆಗಳನ್ನೂ ಸ್ಥಗಿತಗೊಳಿಸಲಾಗಿದೆ.

ಗಿಲಾನಿ ನಿಧನದ ನಂತರ ಅಂತ್ಯಕ್ರಿಯೆ ಪೂರ್ಣಗೊಳ್ಳುವವರೆಗೂ ಕಾಶ್ಮೀರದ ಹಲವು ಕಡೆಗಳಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ಮೊಬೈಲ್‌ –ಇಂಟರ್ನೆಟ್‌ ಸೇವೆ ಸ್ಥಗಿತಗೊಳಿಸಲಾಗಿತ್ತು. ನಂತರ, ಶುಕ್ರವಾರ ರಾತ್ರಿ ಈ ಸಂವಹನ ಸೇವೆಗಳನ್ನು ಪುನರ್‌ಸ್ಥಾಪಿಸಲಾಗಿತ್ತು. ಆದರೆ, ಅಹಿತಕರ ಘಟನೆ ನಡೆಯುವ ಸಾಧ್ಯತೆ ಕುರಿತು ಗುಪ್ತಚರ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಶನಿವಾರ ಮತ್ತೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮೊಬೈಲ್‌, ಇಂಟರ್ನೆಟ್‌ ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT