ADVERTISEMENT

ಚಂಡೀಗಢದಲ್ಲಿ ಅಕ್ಕಿ ಗಿರಣಿ ಕಟ್ಟಡ ಕುಸಿತ; 4 ಕಾರ್ಮಿಕರ ಸಾವು, 20 ಜನರಿಗೆ ಗಾಯ

ಪಿಟಿಐ
Published 18 ಏಪ್ರಿಲ್ 2023, 4:45 IST
Last Updated 18 ಏಪ್ರಿಲ್ 2023, 4:45 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಚಂಡೀಗಢ: ಹರಿಯಾಣದ ಕರ್ನಲ್‌ ಜಿಲ್ಲೆಯಲ್ಲಿ ಮಂಗಳವಾರ ಬೆಳಿಗ್ಗೆ ಅಕ್ಕಿ ಗಿರಣಿ ಕಟ್ಟಡದ ಒಂದು ಭಾಗವು ಕುಸಿದು ಬಿದ್ದಿದ್ದು ನಾಲ್ವರು ಕಾರ್ಮಿಕರು ಮೃತಪಟ್ಟು, 20 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆ ಪ್ರಗತಿಯಲ್ಲಿದೆ.

ಮೂರು ಮಹಡಿಯ ಕಟ್ಟಡ ಕುಸಿದ ಸಂದರ್ಭದಲ್ಲಿ 150ಕ್ಕೂ ಹೆಚ್ಚು ಜನರು ನಿದ್ರಿಸುತ್ತಿದ್ದರು ಎಂದು ಸ್ಥಳದಲ್ಲಿದ್ದ ಕೆಲವು ಕಾರ್ಮಿಕರು ಹೇಳಿದ್ದಾರೆ.

ADVERTISEMENT

'ನಾಲ್ಕು ಮಂದಿ ಮೃತಪಟ್ಟಿದ್ದಾರೆ' ಎಂದು ತರೌರಿ ಪೊಲೀಸ್‌ ಠಾಣೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.