ಪಟ್ನಾ: ಮತ ಎಣಿಕೆ ಮೇಲೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಪ್ರಭಾವ ಬೀರುತ್ತಿದ್ದಾರೆ ಎಂದು ಆರ್ಜೆಡಿ ಹಾಗೂ ಕಾಂಗ್ರೆಸ್ ಮಂಗಳವಾರ ರಾತ್ರಿ ಆರೋಪಿಸಿವೆ.
ಈ ಕುರಿತು ದೂರು ನೀಡಲು ಉಭಯ ಪಕ್ಷಗಳ ನಿಯೋಗ ಚುನಾವಣಾ ಆಯೋಗದ ಕಚೇರಿ ತಲುಪಿದೆ. ಕೆಲವು ವ್ಯತ್ಯಾಸಗಳು ಗಮನಕ್ಕೆ ಬಂದಿವೆ. ಚುನಾವಣಾ ಆಯೋಗದಿಂದ ನ್ಯಾಯ ಬಯಸುತ್ತೇವೆ ಎಂದು ಕಾಂಗ್ರೆಸ್ ನಾಯಕ ಅಖಿಲೇಶ್ ಸಿಂಗ್ ಹೇಳಿದ್ದಾರೆ.
ಈ ಮಧ್ಯೆ, ಆರ್ಜೆಡಿ ಕಾರ್ಯಕರ್ತರು ಪಕ್ಷದ ಹಿರಿಯ ನಾಯಕರಿ ರಾಬ್ರಿ ದೇವಿ ಮನೆ ಎದುರು ನಿತೀಶ್ ಕುಮಾರ್ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.