ನವದೆಹಲಿ: ಅನಾರೋಗ್ಯ ಕಾರಣ ದೆಹಲಿ ಏಮ್ಸ್ಗೆ ದಾಖಲಾಗಿದ್ದ ರಾಷ್ಟ್ರೀಯ ಜನತಾ ದಳ(ಆರ್ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಬುಧವಾರ ಮುಂಜಾನೆ 3 ಗಂಟೆಗೆ ಮನೆಗೆ ತೆರಳಿದ ಬಳಿಕ ಮತ್ತೆ ಮಧ್ಯಾಹ್ನ 12.30 ಗಂಟೆಗೆ ಆಸ್ಪತ್ರೆಯ ಜನರಲ್ ವಾರ್ಡ್ಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಮೇವು ಹಗರಣ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಒಳಗಾಗಿರುವ ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಅವರು ಹಲವು ಕಾಯಿಲೆಗಳಿಂದ ಬಳಲುತ್ತಿದ್ದಾರೆ. ರಾಂಚಿಯ ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ವೈದ್ಯಕೀಯ ಮಂಡಳಿಯ ಶಿಫಾರಸ್ಸಿನ ಮೇರೆಗೆ ಮಂಗಳವಾರ ರಾತ್ರಿ 9 ಗಂಟೆಗೆ ದೆಹಲಿ ಏಮ್ಸ್ಗೆ ದಾಖಲಾಗಿದ್ದರು. ರಾತ್ರಿ ಪೂರ್ತಿ ತುರ್ತು ನಿಗಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿತ್ತು.
ಆರ್ಜೆಡಿ ವರಿಷ್ಠ ಲಾಲು ಪ್ರಸಾದ್ ಆರೋಗ್ಯ ಗಂಭೀರ
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.