ADVERTISEMENT

ಆರ್‌ಜೆಡಿ ನಾಯಕರ ಮನೆ ಮೇಲೆ ಸಿಬಿಐ ದಾಳಿ: ಬಿಜೆಪಿ ವಿರುದ್ಧ ರಾಬ್ಡಿ ದೇವಿ ಕಿಡಿ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 24 ಆಗಸ್ಟ್ 2022, 6:18 IST
Last Updated 24 ಆಗಸ್ಟ್ 2022, 6:18 IST
ರಾಬ್ಡಿ ದೇವಿ (ಪಿಟಿಐ ಸಂಗ್ರಹ ಚಿತ್ರ)
ರಾಬ್ಡಿ ದೇವಿ (ಪಿಟಿಐ ಸಂಗ್ರಹ ಚಿತ್ರ)   

ಪಟ್ನಾ: ಬಿಜೆಪಿಯವರಿಗೆ ನಾವೆಂದರೆ ಭಯ ಎಂದು ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ನಾಯಕಿ ರಾಬ್ಡಿ ದೇವಿ ಹೇಳಿದ್ದಾರೆ.

ಬಿಹಾರದ ಹಲವೆಡೆ ಬುಧವಾರ ಆರ್‌ಜೆಡಿ ನಾಯಕರ ಮನೆ ಮೇಲೆ ಸಿಬಿಐ ದಾಳಿ ದಾಳಿ ನಡೆಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಅವರು (ಬಿಜೆಪಿಯವರು) ಹೆದರಿದ್ದಾರೆ. ನಿತೀಶ್ ಕುಮಾರ್ ಅವರ ನಾಯಕತ್ವದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಬಿಜೆಪಿ ಹೊರತುಪಡಿಸಿ ಎಲ್ಲ ಪಕ್ಷಗಳು ನಮ್ಮ ಜತೆಗಿವೆ. ನಮಗೆ ಬಹುಮತವಿದೆ. ಸಿಬಿಐ ದಾಳಿ ನಮ್ಮನ್ನು ಹೆದರಿಸುವುದಕ್ಕಷ್ಟೇ. ಆದರೆ, ಇದಕ್ಕೆಲ್ಲಾ ನಾವು ಹೆದರುವುದಿಲ್ಲ. ಈ ರೀತಿಯ ದಾಳಿ ನಡೆಯುವುದು ಇದೇ ಮೊದಲಲ್ಲ ಎಂದು ರಾಬ್ಡಿ ದೇವಿ ಹೇಳಿರುವುದಾಗಿ ಸುದ್ದಿ ಸಂಸ್ಥೆ ‘ಎಎನ್‌ಐ’ ಟ್ವೀಟ್ ಮಾಡಿದೆ.

ಆರ್‌ಜೆಡಿ ಎಂಎಲ್‌ಸಿ ಸುನಿಲ್ ಸಿಂಘ್, ಅಶ್ಫಾಕ್ ಕರೀಂ, ಫಯಾಜ್ ಅಹ್ಮದ್ ಹಾಗೂ ಆರ್‌ಜೆಡಿಯ ಮಾಜಿ ಎಂಎಲ್‌ಸಿ ಸುಬೋಧ್ ರಾಯ್ ಅವರ ಪಟ್ನಾದ ನಿವಾಸದ ಮೇಲೆ ಬುಧವಾರ ಬೆಳಿಗ್ಗೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿದ್ದು, ಶೋಧ ಕಾರ್ಯಾಚರಣೆ ನಡೆಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.