ADVERTISEMENT

ರಸ್ತೆ ಕಾಮಗಾರಿ: ಭೂಸ್ವಾಧೀನ ಪ್ರಕ್ರಿಯೆ ಬದಲಾವಣೆಗೆ ಶಿಫಾರಸು

​ಪ್ರಜಾವಾಣಿ ವಾರ್ತೆ
Published 8 ಆಗಸ್ಟ್ 2021, 20:42 IST
Last Updated 8 ಆಗಸ್ಟ್ 2021, 20:42 IST

ನವದೆಹಲಿ: ರಸ್ತೆ ಕಾಮಗಾರಿಗಾಗಿ ಭೂಸ್ವಾಧೀನ ಪ್ರಕ್ರಿಯೆಯನ್ನು ಸರಳಗೊಳಿಸಲು ಸಂಸದೀಯ ಸ್ಥಾಯಿ ಸಮಿತಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ.

‘ರಸ್ತೆ ಮತ್ತು ಹೆದ್ದಾರಿ ಕಾಮಗಾರಿಗಳು ವಿಳಂಬವಾಗಲು ಭೂಸ್ವಾಧೀನ ಪ್ರಕ್ರಿಯೆಯಲ್ಲಿನ ಅಡಚಣೆಗಳೇ ಪ್ರಮುಖ ಕಾರಣ. ವಿಳಂಬದಿಂದ ಕಾಮಗಾರಿಯ ವೆಚ್ಚವೂ ಏರಿಕೆಯಾಗುತ್ತದೆ. ಈ ಅಡಚಣೆ ಮತ್ತು ವೆಚ್ಚ ಏರಿಕೆಯನ್ನು ತಡೆಯಲು ಭೂಸ್ವಾಧೀನ ಪ್ರಕ್ರಿಯೆಯನ್ನು ಸರಳಗೊಳಿಸಬೇಕು’ ಎಂದು ಸಾರಿಗೆ, ಪ್ರವಾಸೋದ್ಯಮ ಮತ್ತು ಸಂಸ್ಕೃತಿ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯು ಶಿಫಾರಸು ಮಾಡಿದೆ.

ಭೂಸ್ವಾಧೀನ ಪ್ರಕ್ರಿಯೆಯಲ್ಲಿ ಮಾರ್ಪಾಡು ಮಾಡಲು ಸಮಿತಿಯು ಶಿಫಾರಸು ಮಾಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.