ADVERTISEMENT

ಸೋಂಕಿನಿಂದ ಮೃತಪಟ್ಟರೆ ವೈದ್ಯಕೀಯ ಸಿಬ್ಬಂದಿ ಕುಟುಂಬಕ್ಕೆ ₹1 ಕೋಟಿ: ಕೇಜ್ರಿವಾಲ್‌

​ಪ್ರಜಾವಾಣಿ ವಾರ್ತೆ
Published 1 ಏಪ್ರಿಲ್ 2020, 21:20 IST
Last Updated 1 ಏಪ್ರಿಲ್ 2020, 21:20 IST
ಅರವಿಂದ ಕೇಜ್ರಿವಾಲ್‌
ಅರವಿಂದ ಕೇಜ್ರಿವಾಲ್‌   

ನವದೆಹಲಿ:ಕೊರೊನಾ ಸೋಂಕಿಗೆ ಚಿಕಿತ್ಸೆ ನೀಡುವ ವೈದ್ಯಕೀಯ ಸಿಬ್ಬಂದಿ ಸೋಂಕಿನಿಂದ ಮೃತಪಟ್ಟರೆ ಅವರ ಕುಟುಂಬಕ್ಕೆ ₹ 1 ಕೋಟಿ ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಬುಧವಾರ ಘೋಷಿಸಿದ್ದಾರೆ.

ಮೂವರು ವೈದ್ಯರಿಗೆ ಕೊರೊನೊ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ವೈದ್ಯರೊಂದಿಗೆ ಕೇಜ್ರಿವಾಲ್‌ ಸಮಾಲೋಚನೆ ನಡೆಸಿದರು.

‘ನಿಮ್ಮ ಸೇವೆ ಯಾವ ಸೈನಿಕರಿಗಿಂತ ಕಡಿಮೆಯಿಲ್ಲ. ಖಾಸಗಿ ಮತ್ತು ಸರ್ಕಾರಿ ವೈದ್ಯರು, ನರ್ಸ್‌ಗಳು ಮತ್ತು ಸ್ವಚ್ಛತಾ ಕಾರ್ಮಿಕರಿಗೂ ಈ ಪರಿಹಾರ ಅನ್ವಯವಾಗಲಿದೆ’ ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.