ತಿರುಪತಿ (ಪಿಟಿಐ): ತಿರುಮಲ ವೆಂಕಟೇಶ್ವರ ದೇಗುಲಕ್ಕೆ ತಮಿಳುನಾಡಿನ ಕುಟುಂಬವೊಂದು ₹10 ಕೋಟಿಯನ್ನು ದೇಣಿಗೆ ನೀಡಿದೆ ಎಂದು ದೇಗುಲದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ಗೋಪಾಲ್ ಬಾಲಕೃಷ್ಣನ್ ಮತ್ತು ಕುಟುಂಬಸ್ಥರು ಟಿಟಿಡಿಯ ಹೆಚ್ಚುವರಿ ಕಾರ್ಯನಿರ್ವಾಹಕ ಅಧಿಕಾರಿಗೆ ಡಿಡಿ ಯನ್ನು ನೀಡಿದ್ದಾರೆ. ದೇಣಿಗೆಯನ್ನು ಟಿಟಿಡಿಯ ಕಲ್ಯಾಣ ಕಾರ್ಯಕ್ರಮಗಳಲ್ಲಿ ಸದ್ವಿನಿಯೋಗ ಮಾಡುವಂತೆ ಮನವಿ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.