ADVERTISEMENT

ಶಿವಸೇನಾ ಹೆಸರು, ಚಿಹ್ನೆಗಾಗಿ ₹2,000 ಕೋಟಿ ಡೀಲ್‌: ಸಂಜಯ್‌ ರಾವುತ್‌ ಗಂಭೀರ ಆರೋಪ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 19 ಫೆಬ್ರುವರಿ 2023, 6:44 IST
Last Updated 19 ಫೆಬ್ರುವರಿ 2023, 6:44 IST
   

ಮುಂಬೈ: ಮೂಲ 'ಶಿವಸೇನಾ' ಹೆಸರು ಮತ್ತು ಬಿಲ್ಲು-ಬಾಣದ ಚಿಹ್ನೆಗಾಗಿ ₹2,000 ಕೋಟಿಗೂ ಮಿಗಿಲಾದ ಹಣಕಾಸು ಅವ್ಯವಹಾರ ನಡೆದಿದೆ ಎಂದು ಶಿವಸೇನಾದ (ಉದ್ಧವ್‌ ಠಾಕ್ರೆ ಬಣದ) ಸಂಸದ ಸಂಜಯ್ ರಾವುತ್ ಭಾನುವಾರ ಮುಂಬೈನಲ್ಲಿ ಆರೋಪಿಸಿದ್ದಾರೆ.

‘ನನಗೆ ಖಚಿತ ಮಾಹಿತಿ ಸಿಕ್ಕಿದೆ, ನನಗೆ ವಿಶ್ವಾಸವಿದೆ, ಇದು ಕೇವಲ ಪ್ರಾಥಮಿಕ ಅಂಕಿ ಅಂಶ ಮಾತ್ರ. ಇದು ಶೇಕಡ 100ರಷ್ಟು ದೃಢ ಮಾಹಿತಿ’ ಎಂದು ರಾವತ್ ಸರಣಿ ಟ್ವೀಟ್‌ಗಳಲ್ಲಿ ಹೇಳಿದ್ದಾರೆ.

‘ಇದು ದೇಶದ ಇತಿಹಾಸದಲ್ಲೇ ಹಿಂದೆಂದೂ ಕಂಡುಕೇಳರಿಯದ ಸಂಗತಿ. ಇನ್ನೂ ಕೆಲವು ವಿಷಯಗಳನ್ನು ಶೀಘ್ರದಲ್ಲೇ ಬಹಿರಂಗಪಡಿಸಲಾಗುವುದು’ ಎಂದು ರಾವತ್ ಹೇಳಿದ್ದಾರೆ. ಸಂಜಯ್‌ ರಾವುತ್‌ ಆರೋಪಗಳಿಂದಾಗಿ ಭಾರತೀಯ ಚುನಾವಣಾ ಆಯೋಗದ (ಇಸಿಐ)ದ ನಿರ್ಧಾರದ ಮೇಲೆ ಅನುಮಾನ ಮೂಡುವಂತಾಗಿದೆ.

ADVERTISEMENT

ಮುಖ್ಯಮಂತ್ರಿ ಏಕನಾಥ ಶಿಂದೆ ನೇತೃತ್ವದ ಬಣಕ್ಕೆ ಮೂಲ ಶಿವಸೇನಾದ ಹೆಸರು ಮತ್ತು 'ಬಿಲ್ಲು-ಬಾಣ'ದ ಚಿಹ್ನೆಯನ್ನು ಮಂಜೂರು ಮಾಡಿ ಚುನಾವಣಾ ಆಯೋಗ ಇತ್ತೀಚೆಗೆ ಆದೇಶಿಸಿತ್ತು. ಇದರ ಹಿನ್ನೆಲೆಯಲ್ಲಿ ರಾವುತ್‌ ಈ ಹೇಳಿಕೆ ನೀಡಿದ್ದಾರೆ.

ಇವುಗಳನ್ನೂ ಓದಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.