ಜಮ್ಮು: ಆರ್ಎಸ್ಎಸ್ ಕಾರ್ಯಕರ್ತ ಮತ್ತು ಅವರ ಖಾಸಗಿ ಭದ್ರತಾ ಅಧಿಕಾರಿಯನ್ನು ಕೊಂದಿದ್ದ ಹಿಜ್ಬುಲ್ ಮುಜಾಹಿದ್ದೀನ್ ಉಗ್ರನನ್ನು ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮಂಗಳವಾರ ರಾತ್ರಿ ಜಿಲ್ಲೆಯ ಹಂಜಾಲಾ ಪ್ರದೇಶದಲ್ಲಿಬಂಧಿಸಿದೆ.
ಬಂಧಿತ ಉಗ್ರನನ್ನು ರುಸ್ತುಂ ಅಲಿ ಎಂದು ಗುರುತಿಸಲಾಗಿದೆ. ಆರ್ಎಸ್ಎಸ್ ಕಾರ್ಯಕರ್ತ ಚಂದ್ರಕಾಂತ ಶರ್ಮಾ ಮತ್ತು ಅವರ ಖಾಸಗಿ ಭದ್ರತಾ ಅಧಿಕಾರಿಯನ್ನು ಕೊಲೆ ಮಾಡಿದ ಆರೋಪವನ್ನು ಚಾರ್ಜ್ಶೀಟ್ನಲ್ಲಿ ನಮೂದಿಸಲಾಗಿದೆ.
ಜಮ್ಮು ವಲಯದಲ್ಲಿ ಬಿಜೆಪಿ ಮತ್ತು ಆರ್ಎಸ್ಎಸ್ನಾಯಕರ ಕೊಲೆಗೆ ಸಂಬಂಧಿಸಿದಂತೆ ನಾಸಿ ಅಹಮದ್ ಶೇಖ್, ನಿಶಾದ್ ಅಹಮದ್ ಮತ್ತು ಆಜಾದ್ ಹುಸೇನ್ ಅವರನ್ನು ಪೊಲೀಸರು ಕಳೆದ ವರ್ಷ ಸೆಪ್ಟೆಂಬರ್ ತಿಂಗಳಲ್ಲಿ ಬಂಧಿಸಿದ್ದರು.
ಬಿಜೆಪಿ ಪ್ರಧಾನ ಕಾರ್ಯದರ್ಶಿ ಅನಿಲ್ ಪವಾರ್ ಅವರನ್ನು 2018ರಲ್ಲಿ ಕೊಲೆ ಮಾಡಲಾಗಿತ್ತು. ಆರ್ಎಸ್ಎಸ್ನ ಹಿರಿಯ ಕಾರ್ಯಕರ್ತ ಶರ್ಮಾ ಮತ್ತು ಅವರ ಭದ್ರತಾ ಅಧಿಕಾರಿಯನ್ನು 2019ರ ಏಪ್ರಿಲ್ನಲ್ಲಿ ಕೊಲೆ ಮಾಡಲಾಗಿತ್ತು. ಎರಡೂ ಕೊಲೆಗಳನ್ನು ಖಂಡಿಸಿ ಜಮ್ಮುವಿನ ಕಿಶ್ತ್ವಾರ್ ಪ್ರದೇಶದಲ್ಲಿ ಪ್ರತಿಭಟನೆಗಳು ನಡೆದಿದ್ದವು.
ಕಿಶ್ತ್ವಾರ್ ಪ್ರದೇಶದಲ್ಲಿ ಉಗ್ರಗಾಮಿ ಚಟುವಟಿಕೆಗಳಿಗೆ ಮತ್ತೆ ಚಾಲನೆ ನೀಡಲುಹಿಜ್ಬುಲ್ ಮುಜಾಹಿದ್ದೀನ್ ಉಗ್ರಗಾಮಿ ಸಂಘಟನೆಯ ನಾಯಕ ಜಹಂಗೀರ್ ಸರೂರಿ ಯತ್ನಿಸುತ್ತಿದ್ದಾನೆ. ಈ ಯತ್ನದ ಭಾಗವಾಗಿ ಈ ಕೊಲೆಗಳು ನಡೆದಿವೆ ಎಂದು ಪೊಲೀಸರು ಶಂಕಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.