ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ಆದಾಯದ ಅಸಮಾನತೆ ಮತ್ತು ನಿರುದ್ಯೋಗದ ಬಗ್ಗೆ ಕಳವಳ ವ್ಯಕ್ತ ಪಡಿಸಿರುವ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ, ಬಡತನ ದೊಡ್ಡ ಸವಾಲಾಗಿದೆ ಎಂದು ಹೇಳಿದರು.
ಸ್ವದೇಶಿ ಜಾಗರಣ ಮಂಚ್ ಆಯೋ ಜಿಸಿದ್ದ ವೆಬಿನಾರ್ನಲ್ಲಿ ಮಾತನಾಡಿದ ಅವರು, ಈ ಸವಾಲು ಎದುರಿಸಲು ಕಳೆದ ಕೆಲ ವರ್ಷಗಳಲ್ಲಿ ಹಲವಾರು ಕ್ರಮಗಳನ್ನು ಕೈಗೊಳ್ಳಲಾಗಿದೆ. 20 ಕೋಟಿ ಜನರು ಬಡತನ ರೇಖೆಗಿಂತ ಕೆಳಗಿದ್ದಾರೆ ಎಂಬುದು ಬೇಸರದ ಸಂಗತಿ. 23 ಕೋಟಿ ಜನರು ದಿನಕ್ಕೆ ₹375 ಕ್ಕಿಂತ ಕಡಿಮೆ ಆದಾಯ ಪಡೆಯುತ್ತಿದ್ದಾರೆ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.