ADVERTISEMENT

ಮಾನನಷ್ಟ ಮೊಕದ್ದಮೆ: ಮಾ.4 ರಂದು ರಾಹುಲ್ ಅರ್ಜಿ ಕುರಿತ ಆದೇಶ

ಪಿಟಿಐ
Published 4 ಫೆಬ್ರುವರಿ 2023, 14:30 IST
Last Updated 4 ಫೆಬ್ರುವರಿ 2023, 14:30 IST
.
.   

ಠಾಣೆ: ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿ ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ಶಾಶ್ವತ ವಿನಾಯಿತಿ ನೀಡಬೇಕೆಂದು ಕೋರಿ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಭಿವಂಡಿಯ ನ್ಯಾಯಾಲಯವು, ಈ ಕುರಿತ ಆದೇಶವನ್ನು ಮಾರ್ಚ್‌ 4ರಂದು ಆದೇಶ ಪ್ರಕಟಿಸುವುದಾಗಿ ಶನಿವಾರ ಹೇಳಿದೆ.

ತಾವು ದೆಹಲಿಯಲ್ಲಿ ನೆಲೆಸಿರುವುದರಿಂದ ಹಾಗೂ ಸಂಸದರಾಗಿರುವುದರಿಂದ ಠಾಣೆ ಜಿಲ್ಲೆಯಲ್ಲಿರುವ ನ್ಯಾಯಾಲಯಕ್ಕೆ ಹಾಜರಾಗುವುದಕ್ಕೆ ವಿನಾಯಿತಿ ನೀಡಬೇಕೆಂದು ರಾಹುಲ್‌ ಗಾಂಧಿ ಅವರು ಅರ್ಜಿಯಲ್ಲಿ ಮನವಿ ಮಾಡಿದ್ದರು.

2014ರಲ್ಲಿ ಭಿವಂಡಿಯಲ್ಲಿ ಭಾಷಣ ಮಾಡಿದ್ದ ರಾಹುಲ್‌ ಗಾಂಧಿ ಅವರು ಮಹಾತ್ಮ ಗಾಂಧಿ ಅವರ ಹತ್ಯೆಯ ಹಿಂದೆ ಆರ್‌ಎಸ್‌ಎಸ್ ಕೈವಾಡವಿದೆ ಎಂದು ಆರೋಪಿಸಿದ್ದರು. ಈ ಸಂಬಂಧ ರಾಹುಲ್‌ ವಿರುದ್ಧ ಆರ್‌ಎಸ್‌ಎಸ್ ಕಾರ್ಯಕರ್ತ ರಾಜೇಶ್‌ ಕುಂಟೆ ಎಂಬುವವರು ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.