ಜೈಪುರ (ಪಿಟಿಐ): ‘ರಾಷ್ಟ್ರೀಯ ಸ್ವಯಂಸೇವಕ ಸಂಘವು (ಆರೆಸ್ಸೆಸ್) ಬಲಪಂಥೀಯವೂ ಅಲ್ಲ. ಎಡಪಂಥೀಯ ಸಂಘಟನೆಯೂ ಅಲ್ಲ. ಸಂಘವು ಯಾವುದೇ ರಾಜಕೀಯ ಒಲವೂ ಇಲ್ಲದೆ ದೇಶದ ಹಿತಾಸಕ್ತಿಗಾಗಿ ಕೆಲಸ ಮಾಡುತ್ತದೆ’ ಎಂದು ಆರೆಸ್ಸೆಸ್ ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ ತಿಳಿಸಿದ್ದಾರೆ.
ಬುಧವಾರ ಇಲ್ಲಿ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಸ್ವಯಂಸೇವಕ ಸಂಘ–ನಿನ್ನೆ, ಇಂದು ಮತ್ತು ನಾಳೆ’ ವಿಷಯದ ಕುರಿತು ಮಾತನಾಡಿದ ಅವರು, ‘ದೇಶದಲ್ಲಿ ನೆಲೆಸಿರುವ ಎಲ್ಲಾ ನಾಗರಿಕರೂ ಹಿಂದೂಗಳು. ಅವರ ಆರಾಧನೆಯ ವಿಧಾನಗಳು ಬೇರೆ ಬೇರೆ ಆಗಿರಬಹುದು. ಆದರೆ ಎಲ್ಲರ ಡಿಎನ್ಎ ಒಂದೇ’ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.