ADVERTISEMENT

ಪಾಲಕ್ಕಾಡ್: ಆರ್‌ಎಸ್‌ಎಸ್‌ ಕಾರ್ಯಕರ್ತನ ಹತ್ಯೆ

ಪಿಟಿಐ
Published 16 ಏಪ್ರಿಲ್ 2022, 10:46 IST
Last Updated 16 ಏಪ್ರಿಲ್ 2022, 10:46 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಪಾಲಕ್ಕಾಡ್: ಪಟ್ಟಣದ ನಿವಾಸಿ, ಆರ್‌ಎಸ್‌ಎಸ್‌ ಕಾರ್ಯಕರ್ತ ಶ್ರೀನಿವಾಸನ್ (45) ಎಂಬುವವರನ್ನು ಗುಂಪೊಂದು ಶನಿವಾರ ಹತ್ಯೆ ಮಾಡಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಪಿಎಫ್‌ಐ ನಾಯಕ ಸುಬೇರ್‌ (43) ಎಂಬುವವರ ಹತ್ಯೆ ನಡೆದ 24 ಗಂಟೆಗಳ ಒಳಗಾಗಿ ಈ ಘಟನೆ ನಡೆದಿದೆ. ಪಾಲಕ್ಕಾಡ್‌ ಜಿಲ್ಲೆಯ ಎಲಪ್ಪಳ್ಳಿ ಗ್ರಾಮದಲ್ಲಿ ಶುಕ್ರವಾರ ಸುಬೇರ್‌ ಅವರ ಹತ್ಯೆಯಾಗಿತ್ತು. ಮಸೀದಿಯಲ್ಲಿ ಪ್ರಾರ್ಥನೆ ಮುಗಿಸಿ ಮನೆಗೆ ಮರಳುತ್ತಿದ್ದಾಗ ಅವರನ್ನು ಕೊಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.

‘ಪಟ್ಟಣದ ಹೃದಯಭಾಗದಲ್ಲಿ ಶ್ರೀನಿವಾಸನ್ ಅವರ ಅಂಗಡಿ ಇದೆ. ಬೈಕ್‌ಗಳಲ್ಲಿ ಬಂದ ದುಷ್ಕರ್ಮಿಗಳು, ಅಂಗಡಿಯಲ್ಲಿದ್ದ ಶ್ರೀನಿವಾಸನ್‌ ಅವರ ಮೇಲೆ ದಾಳಿ ನಡೆಸಿದರು. ಕೂಡಲೇ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟರು’ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಿವಾಸನ್‌ ಕೊಲೆಯಲ್ಲಿ ಪಿಎಫ್‌ಐನ ರಾಜಕೀಯ ಅಂಗವಾದ ಎಸ್‌ಡಿಪಿಐ ಪಾತ್ರ ಇದೆ ಎಂದು ಬಿಜೆಪಿ ಆರೋಪಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.