ನವದೆಹಲಿ:2022ರ ವೇಳೆಗೆ ಗ್ರಾಮೀಣ ಭಾಗದ ಎಲ್ಲ ಮನೆಗಳಿಗೂವಿದ್ಯುತ್ ಸಂಪರ್ಕ ಹಾಗೂ ಸ್ವಚ್ಛ ರೀತಿಯಲ್ಲಿ ಅಡುಗೆ ಮಾಡುವ ವ್ಯವಸ್ಥೆ ಕಲ್ಪಿಸಲಾಗುವುದು. ಅಂತ್ಯೋದಯ ಯೋಜನೆಗೆ ಹೆಚ್ಚಿನ ಗಮನ ಹರಿಸಲಾಗುವುದು. ಸರ್ಕಾರದ ಸೌಲಭ್ಯ ಪಡೆಯಲು ಬಯಸುವ ಎಲ್ಲ ಕುಟುಂಬಗಳಿಗೆ ಈ ಯೋಜನೆ ತಲುಪಲಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ನಲ್ಲಿ ಪ್ರಕಟಿಸಿದರು.
2024ರ ವೇಳೆಗೆ ಗ್ರಾಮೀಣ ಪ್ರದೇಶದ ಪ್ರತಿಯೊಂದು ಮನೆಗೂ ಕುಡಿಯುವ ನೀರು ದೊರೆಯುವಂತೆ ಮಾಡಲಾಗುವುದು. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿ ಅವರು ನೀಡಿದ ಭರವಸೆಯ ಹಿನ್ನೆಲೆಯಲ್ಲಿ ಈ ಯೋಜನೆಯ ಬಗ್ಗೆ ನಿರ್ಮಲಾ ಸೀತಾರಾಮನ್ ಅವರ ಘೋಷಣೆ ಮಹತ್ವ ಪಡೆದುಕೊಂಡಿದೆ.
ಬಜೆಟ್ ಲೈವ್ ಅಪ್ಡೇಟ್ಸ್ಗಾಗಿhttp://bit.ly/2YB34Wyಲಿಂಕ್ ಕ್ಲಿಕ್ ಮಾಡಿ.
ಬಜೆಟ್ನ ಸಮಗ್ರ ಮಾಹಿತಿಗೆhttps://www.prajavani.net/budget-2019ಲಿಂಕ್ ನೋಡಿ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.