ADVERTISEMENT

ಆಪರೇಷನ್ ಗಂಗಾ: ಯುದ್ಧಪೀಡಿತ ಉಕ್ರೇನ್‌ನಿಂದ ಮತ್ತೆ 240 ಮಂದಿ ಭಾರತೀಯರು ವಾಪಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 28 ಫೆಬ್ರುವರಿ 2022, 6:49 IST
Last Updated 28 ಫೆಬ್ರುವರಿ 2022, 6:49 IST
ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿರುವ ಚಿತ್ರ
ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿರುವ ಚಿತ್ರ   

ನವದೆಹಲಿ: ಯುದ್ಧಪೀಡಿತ ಉಕ್ರೇನ್‌ನಿಂದ ನೆರೆಯ ದೇಶಗಳ ಮೂಲಕ ಭಾರತೀಯರನ್ನು ವಾಪಸ್ ಕರೆಸಿಕೊಳ್ಳುವ ಕಾರ್ಯಾಚರಣೆ ಚುರುಕುಪಡೆದುಕೊಂಡಿದೆ.

‘ಆಪರೇಷನ್ ಗಂಗಾ’ ಕಾರ್ಯಾಚರಣೆಯ ಆರನೇ ವಿಮಾನವು 240 ಭಾರತೀಯರನ್ನು ಕರೆದುಕೊಂಡು ಬುಡಾಪೆಸ್ಟ್‌ನಿಂದ ಹೊರಟಿದೆ. ಇದರೊಂದಿಗೆ ಸ್ಥಳಾಂತರ ಪ್ರಯತ್ನಗಳು ಚುರುಕುಪಡೆದುಕೊಂಡಿವೆ ಎಂದು ವಿದೇಶಾಂಗ ಸಚಿವ ಎಸ್. ಜೈಶಂಕರ್ ಟ್ವೀಟ್ ಮಾಡಿದ್ದಾರೆ.

ಈಗಾಗಲೇ ಐದು ವಿಮಾನಗಳಲ್ಲಿ ನೂರಾರು ಮಂದಿ ಭಾರತೀಯರು ತವರಿಗೆ ವಾಪಸಾಗಿದ್ದಾರೆ.

ಈ ಮಧ್ಯೆ, ಭಾರತೀಯರ ಸ್ಥಳಾಂತರ ಕಾರ್ಯಾಚರಣೆಗೆ ನೆರವಾಗುವ ಉದ್ದೇಶದಿಂದ ಕೇಂದ್ರದ ಸಚಿವರಾದ ಹರದೀಪ್ ಸಿಂಗ್ ಪುರಿ, ಜ್ಯೋತಿರಾದಿತ್ಯ ಸಿಂಧಿಯಾ, ಕಿರಣ್ ರಿಜಿಜು, ವಿ.ಕೆ. ಸಿಂಗ್ ಅವರು ಉಕ್ರೇನ್ ನೆರೆ ದೇಶಗಳಿಗೆ ತೆರಳಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.