ADVERTISEMENT

ಮಕರವಿಳಕ್ಕು ಉತ್ಸವಕ್ಕೆ ಸಜ್ಜುಗೊಂಡ ಶಬರಿಮಲೆ

ಪಿಟಿಐ
Published 30 ಡಿಸೆಂಬರ್ 2020, 14:24 IST
Last Updated 30 ಡಿಸೆಂಬರ್ 2020, 14:24 IST
ಶಬರಿಮಲೆ ಅಯ್ಯಪ್ಪ ದೇಗುಲ
ಶಬರಿಮಲೆ ಅಯ್ಯಪ್ಪ ದೇಗುಲ   

ಶಬರಿಮಲೆ: ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ನಡೆಯುವ ಮಕರವಿಳಕ್ಕು ಉತ್ಸವಕ್ಕೆ ಶಬರಿಮಲೆ ಸಜ್ಜಾಗಿದೆ.

ದೇವಸ್ಥಾನ ಪ್ರವೇಶಿಸಲು ಭಕ್ತರಿಗೆ ಗುರುವಾರ ಬೆಳಿಗ್ಗೆಯಿಂದ ಅವಕಾಶ ನೀಡಲಾಗುತ್ತದೆ. ಆದರೆ, ಬುಧವಾರ ಸಂಜೆಯೇ ದೇವಸ್ಥಾನದ ಬಾಗಿಲು ತೆರೆಯಲಾಗಿದೆ ಎಂದು ತಿರುವಾಂಕೂರು ದೇವಸ್ವ ಮಂಡಳಿ (ಟಿಡಿಬಿ) ಅಧಿಕಾರಿಗಳು ತಿಳಿಸಿದರು.

ಮಕರವಿಳಕ್ಕು ಉತ್ಸವ ಜನವರಿ 14ರಂದು ನಡೆಯಲಿದ್ದು, ಜ. 20ರಂದು ದೇವಸ್ಥಾನವನ್ನು ಬಂದ್‌ ಮಾಡಲಾಗುತ್ತದೆ.

ADVERTISEMENT

ಕೋವಿಡ್–19 ಹಿನ್ನೆಲೆಯಲ್ಲಿ ಸಾಕಷ್ಟು ನಿರ್ಬಂಧಗಳ ನಡುವೆ ದೇವರ ದರ್ಶನಕ್ಕೆ ಅವಕಾಶ ನೀಡಲಾಗುತ್ತಿದೆ. ದಿನಕ್ಕೆ 5,000 ಭಕ್ತರಿಗೆ ಮಾತ್ರ ದೇವಸ್ಥಾನ ಪ್ರವೇಶಿಸಲು ಅವಕಾಶ ಒದಗಿಸಲಾಗುತ್ತದೆ. ಭಕ್ತರು ತಮಗೆ ಕೋವಿಡ್‌–19 ಇಲ್ಲ ಎಂಬ ಬಗ್ಗೆ ಪ್ರಮಾಣಪತ್ರ ಹಾಜರುಪಡಿಸಬೇಕು. ಶಬರಿಮಲೆಗೆ ಬರುವುದಕ್ಕೆ 48 ಗಂಟೆ ಮೊದಲು ಈ ಪ್ರಮಾಣಪತ್ರ ಪಡೆದಿರಬೇಕು ಎಂದು ಮಂಡಳಿ ಅಧಿಕಾರಿಗಳು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.