ADVERTISEMENT

ಶಬರಿಮಲೆ: ದಿನಕ್ಕೆ 90 ಸಾವಿರ ಭಕ್ತರಿಗಷ್ಟೇ ದರ್ಶನ ಅವಕಾಶ

ಪಿಟಿಐ
Published 12 ಡಿಸೆಂಬರ್ 2022, 14:41 IST
Last Updated 12 ಡಿಸೆಂಬರ್ 2022, 14:41 IST
ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಸೋಮವಾರ ಸರದಿಯಲ್ಲಿ ನಿಂತಿದ್ದರು – ಪಿಟಿಐ ಚಿತ್ರ
ಶಬರಿಮಲೆ ಅಯ್ಯಪ್ಪ ದೇವಾಲಯದಲ್ಲಿ ದೇವರ ದರ್ಶನಕ್ಕಾಗಿ ಭಕ್ತರು ಸೋಮವಾರ ಸರದಿಯಲ್ಲಿ ನಿಂತಿದ್ದರು – ಪಿಟಿಐ ಚಿತ್ರ   

ತಿರುವನಂತಪುರ: ಶಬರಿಮಲೆ ಅಯ್ಯಪ್ಪ ದೇವಾಲಯಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಏರಿಕೆಯಾಗುತ್ತಿರುವ ಕಾರಣ ದಿನಕ್ಕೆ 90 ಸಾವಿರ ಮಂದಿ ಭಕ್ತರಿಗಷ್ಟೇ ದೇವರ ದರ್ಶನಕ್ಕೆ ಅವಕಾಶ ನೀಡಲು ಕೇರಳ ಸರ್ಕಾರ ಸೋಮವಾರ ತೀರ್ಮಾನಿಸಿದೆ.

ದೇವರ ದರ್ಶನ ಸಮಯವನ್ನು ಒಂದು ಗಂಟೆ ವಿಸ್ತರಿಸಲಾಗಿದೆ. ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಕಚೇರಿಯ ಮೂಲಗಳು ತಿಳಿಸಿವೆ.

ಭಕ್ತರ ಸಂದಣಿಯನ್ನು ಉತ್ತಮ ರೀತಿಯಲ್ಲಿ ನಿರ್ವಹಿಸಿ ಎಂದು ಕೇರಳ ಹೈಕೋರ್ಟ್ ಭಾನುವಾರ ಪತ್ತನಂತ್ತಿಟ್ಟ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗೆ ನಿರ್ದೇಶನ ನೀಡಿದ ಬಳಿಕ ಸರ್ಕಾರವು ಈ ತೀರ್ಮಾನ ಕೈಗೊಂಡಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.