ಮುಂಬೈ: ವಿವಾದಿತ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರನ್ನು ಸೇವೆಯಿಂದ ವಜಾಗೊಳಿಸಿ ಮುಂಬೈ ಪೊಲೀಸ್ ಕಮಿಷನರ್ ಹೇಮಂತ್ ನಾಗರಾಳೆ ಮಂಗಳವಾರ ಆದೇಶ ಹೊರಡಿಸಿದ್ದಾರೆ.
ಅವರು ಸಿಐಡಿಯ ಕ್ರೈಂ ಬ್ಯ್ರಾಂಚ್ಗೆ ಹೊಂದಿಕೊಂಡಿರುವ ಕ್ರೈಂ ಇಂಟೆಲಿಜೆನ್ಸ್ ಘಟಕದಲ್ಲಿ ಸಹಾಯಕ ಪೊಲೀಸ್ ಇನ್ಸ್ಪೆಕ್ಟರ್ ಆಗಿದ್ದರು.
ಉದ್ಯಮಿ ಮುಕೇಶ್ ಅಂಬಾನಿ ನಿವಾಸದ ಬಳಿ ಸ್ಫೋಟಕಗಳು ತುಂಬಿದ್ದ ವಾಹನ ನಿಲ್ಲಿಸಿದ ಪ್ರಕರಣ ಹಾಗೂ ಈ ವಾಹನದ ಮಾಲೀಕ ಮನಸುಖ್ ಹಿರೇನ್ ಹತ್ಯೆ ಪ್ರಕರಣದಲ್ಲಿ ವಾಜೆ ಪ್ರಮುಖ ಆರೋಪಿಯಾಗಿದ್ದು, ಸದ್ಯ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.