ಕೊಚ್ಚಿ: ಉತ್ತರ ಪ್ರದೇಶ ಮೂಲದ 19 ವರ್ಷದ ನಾವಿಕರೊಬ್ಬರು ಮಂಗಳವಾರ ಮುಂಜಾನೆ ಇಲ್ಲಿನ ನೌಕಾ ನೆಲೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಗುಂಡೇಟಿನ ಗಾಯಗಳಿರುವ ಮೃತದೇಹ ನೌಕಾನೆಲೆಯಲ್ಲಿ ಪತ್ತೆಯಾಗಿದೆ ಎಂದು ರಕ್ಷಣಾ ಇಲಾಖೆಯ ವಕ್ತಾರರು ತಿಳಿಸಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ನೌಕಾಪಡೆ ವಿಚಾರಣೆಗೆ ಆದೇಶಿಸಿದೆ. ಸ್ಥಳೀಯ ಪೊಲೀಸರು ಅಸಹಜ ಸಾವು ಎಂಬುದಾಗಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ವಕ್ತಾರರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.