ADVERTISEMENT

ಕಾಂಗ್ರೆಸ್‌ಗೆ ಸಜ್ಜನ್ ರಾಜೀನಾಮೆ

ಪಿಟಿಐ
Published 18 ಡಿಸೆಂಬರ್ 2018, 20:33 IST
Last Updated 18 ಡಿಸೆಂಬರ್ 2018, 20:33 IST
ದೆಹಲಿಯ ದೇವಾಲಯವೊಂದರಲ್ಲಿ ಮಂಗಳವಾರ ಪ್ರಾರ್ಥನೆ ಸಲ್ಲಿಸಿ ಹೊರಬಂದ ಸಜ್ಜನ್ ಕುಮಾರ್
ದೆಹಲಿಯ ದೇವಾಲಯವೊಂದರಲ್ಲಿ ಮಂಗಳವಾರ ಪ್ರಾರ್ಥನೆ ಸಲ್ಲಿಸಿ ಹೊರಬಂದ ಸಜ್ಜನ್ ಕುಮಾರ್   

ನವದೆಹಲಿ:1984ರ ಸಿಖ್ ವಿರೋಧಿ ದಂಗೆಯಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಕಾಂಗ್ರೆಸ್‌ನ ಮಾಜಿ ಸಂಸದ ಸಜ್ಜನ್ ಕುಮಾರ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಅಧ್ಯಕ್ಷ ರಾಹುಲ್ ಗಾಂಧಿಗೆ ಸೋಮವಾರ ರಾತ್ರಿಯೇ ಪತ್ರ ಬರೆದಿರುವ ಅವರು, ರಾಜೀನಾಮೆಯನ್ನು ತಕ್ಷಣವೇ ಅಂಗೀಕರಿಸುವಂತೆ ಮನವಿ ಮಾಡಿಕೊಂಡಿದ್ದಾರೆ.

‘ಶಿಕ್ಷಗೆ ಗುರಿಯಾಗಿರುವ ತಮ್ಮಿಂದ ಪಕ್ಷಕ್ಕೆ ಮುಜುಗರವಾಗಬಾರದು ಎಂದು ಅವರು ರಾಜೀನಾಮೆ ನೀಡಿದ್ದಾರೆ’ ಎಂದು ಸಜ್ಜನ್ ಅವರ ಆಪ್ತರು ಮಾಹಿತಿ ನೀಡಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.