ADVERTISEMENT

ಕೊರೊನಾ | ಕೃಷಿ ಉತ್ಪನ್ನಗಳ ಮಾರಾಟ, ಖರೀದಿಗೆ ಕರ್ಫ್ಯೂ ಇಲ್ಲ: ಕೇಂದ್ರ ಕೃಷಿ ಸಚಿವ

ಏಜೆನ್ಸೀಸ್
Published 2 ಏಪ್ರಿಲ್ 2020, 12:35 IST
Last Updated 2 ಏಪ್ರಿಲ್ 2020, 12:35 IST
ಕೇಂದ್ರ ಕೃಷಿ ಸಚಿವ ನರೇಂದ್ರ ತೊಮರ್
ಕೇಂದ್ರ ಕೃಷಿ ಸಚಿವ ನರೇಂದ್ರ ತೊಮರ್    

ನವದೆಹಲಿ: ಕೃಷಿ ಮತ್ತು ಅದಕ್ಕೆ ಸಂಬಂಧಿಸಿದಂತೆ ಚಟುವಟಿಕೆಯಂತ್ರೋಪಕರಣಗಳ ಸಾಗಾಟಕ್ಕೆ ಕೊರೊನಾ ಲಾಕ್‌‌ಡೌನ್ ಅನ್ವಯಿಸುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದು, ಕೃಷಿ ಚಟುವಟಿಕೆ ಕೈಗೊಳ್ಳುವಾಗಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಮುಖ್ಯ ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ತೊಮರ್ ಹೇಳಿದ್ದಾರೆ.

ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರತ ಕೃಷಿ ಪ್ರಧಾನ ದೇಶ,ಆದ್ದರಿಂದ ಕೃಷಿಗೆ ಸಂಬಂಧಿಸಿದ ವಸ್ತುಗಳ ಮಾರಾಟ, ವಿತರಣೆಗೆ ಕೊರೊನಾ ಲಾಕ್ ಡೌನ್ ಅನ್ವಯಿಸುವುದಿಲ್ಲಎಂದು ಹೇಳಿದ್ದಾರೆ.

ಬೀಜ, ರಾಸಾಯನಿಕ ಗೊಬ್ಬರ, ಕ್ರಿಮಿನಾಶಕಗಳ ಮಾರಾಟ, ಕೃಷಿ ಉತ್ಪನ್ನಗಳ ಮಾರಾಟ ಮತ್ತು ಸಾಗಾಣಿಕೆ ಇವುಗಳಿಗೆ ಕರ್ಫ್ಯೂಅನ್ವಯಿಸುವುದಿಲ್ಲ. ಆದರೆ, ಮಾರಾಟ ಮಾಡುವಾಗ ಮತ್ತು ಚಟುವಟಿಕೆ ನಡೆಯುವಾಗ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಒತ್ತಿ ಹೇಳಿರುವುದಾಗಿ ತೊಮರ್ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.