ನೋಯ್ಡಾ: ಗ್ರೇಟರ್ ನೋಯ್ಡಾದಲ್ಲಿ ಸಮಾಜವಾದಿ ಪಕ್ಷದ ಮುಖಂಡರೊಬ್ಬರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದಾನೆ.
ಸಮಾಜವಾದಿ ಪಕ್ಷದ ಜಿಲ್ಲಾ ಕಾರ್ಯದರ್ಶಿ ಬ್ರಜ್ಪಾಲ್ ರಾಥಿ ಎಂಬುವವರ ಮೇಲೆ ದಾಳಿ ನಡೆದಿದ್ದು, ಗಾಯಗೊಂಡಿರುವ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಶುಕ್ರವಾರ ರಾತ್ರಿ ಬ್ರಜ್ಪಾಲ್ ಅವರು ಗೆಳೆಯನ ಜೊತೆ ಕಾರಿನಲ್ಲಿ ಮನೆಗೆ ಮರಳುತ್ತಿದ್ದಾಗ ದುಷ್ಕರ್ಮಿ ಗುಂಡು ಹಾರಿಸಿದ್ದಾನೆ,ಅವರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗೌತಮಬುದ್ಧ ನಗರದಲ್ಲಿ ಸ್ಥಳೀಯ ಪಕ್ಷದ ಮುಖಂಡನೊಬ್ಬನ ಹತ್ಯೆ ನಡೆದು 12 ಗಂಟೆಯೊಳಗೆ ಈ ದಾಳಿ ನಡೆದಿದೆ ಎಂದಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.