ADVERTISEMENT

ಸಮಾಜವಾದಿ ಪಕ್ಷ ಮುಸ್ಲಿಮರಿಗೆ ಕೆಲಸ ಮಾಡುತ್ತಿಲ್ಲ: ಎಸ್‌ಪಿ ಸಂಸದ ರೆಹಮಾನ್ ಬಾರ್ಕ್

​ಪ್ರಜಾವಾಣಿ ವಾರ್ತೆ
Published 10 ಏಪ್ರಿಲ್ 2022, 9:32 IST
Last Updated 10 ಏಪ್ರಿಲ್ 2022, 9:32 IST
ಶಾಫಿಕುರ್ ರೆಹಮಾನ್
ಶಾಫಿಕುರ್ ರೆಹಮಾನ್   

ಸಂಭಾಲ್(ಉತ್ತರಪ್ರದೇಶ): ಸಮಾಜವಾದಿ ಪಕ್ಷ (ಎಸ್‌ಪಿ)ದ ಸಂಸದ ಶಫಿಕುರ್ ರೆಹಮಾನ್ ಬಾರ್ಕ್ ಅವರು ತಮ್ಮದೇ ಪಕ್ಷದ ವಿರುದ್ಧ ಆರೋಪ ಮಾಡಿದ್ದು,ಎಸ್‌ಪಿ ಮುಸ್ಲಿಮರ ಪರವಾಗಿಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿಬಿಜೆಪಿ ಸರ್ಕಾರದ ಕಾರ್ಯವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಅವರು, ಯೋಗಿ ಸರ್ಕಾರ ಮುಸ್ಲಿಮರಿಗೆ ನ್ಯಾಯ ಒದಗಿಸುತ್ತಿಲ್ಲ ಎಂದು ಹೇಳಿದ್ದಾರೆ.

ಉತ್ತರಪ್ರದೇಶದ ವಿಧಾನ ಪರಿಷತ್ ಚುನಾವಣೆಯಲ್ಲಿ ಶನಿವಾರ ಮತ ಚಲಾಯಿಸಿದ ಬಳಿಕ ಅವರು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ADVERTISEMENT

ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಮ್ಮ ನಿಯಮ, ಸಿದ್ಧಾಂತಗಳಿಗಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಮುಸ್ಲಿಮರಿಗೆ ನ್ಯಾಯ ಒದಗಿಸುತ್ತಿಲ್ಲ. ಇತ್ತ ಸಮಾಜವಾದಿ ಪಕ್ಷ ಕೂಡ ಮುಸ್ಲಿಮರ ಪರವಾಗಿ ಕೆಲಸ ಮಾಡುತ್ತಿಲ್ಲ ಎಂದು ಹೇಳಿದ್ದಾರೆ.

ಬಾರ್ಕ್‌ ಅವರು ತಮ್ಮದೇ ಪಕ್ಷದ ವಿರುದ್ಧ ಆರೋಪ ಮಾಡುವ ಮೂಲಕ ಪಕ್ಷವನ್ನುಇಕ್ಕಟ್ಟಿಗೆ ಸಿಲುಕಿಸಿದ್ದಾರೆ. ಈ ಹಿಂದೆ ಕೂಡ ಅವರು ಹಲವು ವಿವಾದ್ಮಕ ವಿಷಯಗಳ ಬಗ್ಗೆ ಮಾತನಾಡಿ ಸುದ್ದಿಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.