ADVERTISEMENT

ಬೇಕಿದ್ರೆ ಇಟ್ಟುಕೊಳ್ಳಿ, ಬೇಡವಾದರೆ ಡಿಲೀಟ್ ಮಾಡಿ: ‘ಸಂಚಾರ ಸಾಥಿ’ ಬಗ್ಗೆ ಸಿಂಧಿಯಾ

ಪಿಟಿಐ
Published 2 ಡಿಸೆಂಬರ್ 2025, 7:56 IST
Last Updated 2 ಡಿಸೆಂಬರ್ 2025, 7:56 IST
<div class="paragraphs"><p>ಜ್ಯೋತಿರಾದಿತ್ಯ ಸಿಂಧಿಯಾ </p></div>

ಜ್ಯೋತಿರಾದಿತ್ಯ ಸಿಂಧಿಯಾ

   

ನವದೆಹಲಿ: ‘ಮೊಬೈಲ್‌ ಬಳಕೆದಾರರು ಸಂಚಾರ ಸಾಥಿ ಅಪ್ಲಿಕೇಷನ್‌ ಅನ್ನು ಅಳಿಸಲು ಸ್ವತಂತ್ರರು ಮತ್ತು ಅವರು ಅದರಲ್ಲಿ ನೋಂದಣಿ ಮಾಡಿಕೊಳ್ಳುವವರೆಗೆ ಅದು ನಿಷ್ಕ್ರಿಯವಾಗಿ ಇರುತ್ತದೆ’ ಎಂದು ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸ್ಪಷ್ಟನೆ ನೀಡಿದ್ದಾರೆ. 

‘ನೀವು ಅಳಿಸಲು ಬಯಸಿದ್ದರೆ, ಅದನ್ನು ಅಳಿಸಬಹುದು. ಅದನ್ನು ಬಳಸದಿದ್ದರೆ ನೋಂದಾಯಿಸಿಕೊಳ್ಳಬೇಡಿ. ಒಂದು ವೇಳೆ ನೋಂದಾಯಿಸಿದರೆ ಅದು ಸಕ್ರಿಯವಾಗಿ ಉಳಿಯುತ್ತದೆ. ಇಲ್ಲದಿದ್ದರೆ ನಿಷ್ಕ್ರಿಯವಾಗಿರುತ್ತದೆ’ ಎಂದು ಅವರು ಸಂಸತ್ತಿನ ಹೊರಗೆ ಸುದ್ದಿಗಾರರಿಗೆ ತಿಳಿಸಿದರು. 

ADVERTISEMENT

‘ವಂಚನೆ ಮತ್ತು ಕಳ್ಳತನದಿಂದ ಗ್ರಾಹಕರನ್ನು ರಕ್ಷಿಸುವುದು ಈ ಅಪ್ಲಿಕೇಷನ್‌ನ ಉದ್ದೇಶ. ಆದರೆ, ಇದರ ಬಗ್ಗೆ ಹೆಚ್ಚಿನ ಜನರಿಗೆ ತಿಳಿದಿಲ್ಲ’ ಎಂದರು. 

‘ಈ ಅಪ್ಲಿಕೇಷನ್‌ ಮೂಲಕ ಯಾವುದೇ ಕರೆ ಮೇಲ್ವಿಚಾರಣೆ, ನಿಗಾ ಮಾಡುವುದಿಲ್ಲ. ಇದರ ಆಧಾರದ ಮೇಲೆ ಯಾವುದೇ ಗೂಢಚಾರಿಕೆಯೂ ನಡೆಯುವುದಿಲ್ಲ. ಈ ಬಗ್ಗೆ ವಿರೋಧ ಪಕ್ಷಗಳು ಆರೋಪಗಳಲ್ಲಿ ಹುರುಳಿಲ್ಲ’ ಎಂದು ಪ್ರತಿಕ್ರಿಯಿಸಿದರು.   

‘ಇದು ಸಾರ್ವಜನಿಕರ ರಕ್ಷಣೆಗಾಗಿ ಇರುವ ಅಪ್ಲಿಕೇಷನ್‌. ವಿರೋಧಿಸುವುದು ಸಲ್ಲ. ಇದರ ಆಧಾರದ ಮೇಲೆ ಫೋನ್‌ ಐಎಂಇಐ ಸಂಖ್ಯೆ ನಕಲಿಯೊ ಅಥವಾ ಸಲಿಯೊ ಎಂಬುದನ್ನು ಗರುತಿಸಬಹುದಾಗಿದೆ. ಹಲವು ವಂಚನೆಗಳನ್ನು ತಡೆಯಬಹದಾಗಿದೆ’ ಎಂದು ಅವರು ವಿವರಿಸಿದರು. 

ಇಲ್ಲಿಯವರೆಗೆ 1.5 ಕೋಟಿಗೂ ಹೆಚ್ಚು ಮೊಬೈಲ್‌ಗಳಲ್ಲಿ ಈ ಅಪ್ಲಿಕೇಷನ್‌ ಡೌನ್‌ಲೋಡ್‌ ಆಗಿದೆ. ಇದರ ಆಧಾರದ ಮೇಲೆ 20 ಲಕ್ಷಕ್ಕೂ ಹೆಚ್ಚು ಕದ್ದ ಮೊಬೈಲ್‌ಗಳನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 7.5 ಲಕ್ಷ ಮೊಬೈಲ್‌ಗಳನ್ನು ಬಳಕೆದಾರರಿಗೆ ಹಿಂತಿರುಗಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.