ADVERTISEMENT

‘ಮರಳು ಗಣಿಗಾರಿಕೆ: ನಿಯಮಾನುಸಾರ ಅನುಮತಿ’

ಸಿಆರ್‌ಝಡ್‌; ರಾಜ್ಯಕ್ಕೆ ಕೇಂದ್ರದ ಸೂಚನೆ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2018, 17:53 IST
Last Updated 4 ಡಿಸೆಂಬರ್ 2018, 17:53 IST

ನವದೆಹಲಿ: ಕರಾವಳಿ ನಿಯಂತ್ರಣ ವಲಯ (ಸಿಆರ್‌ಝಡ್‌)ದ ವ್ಯಾಪ್ತಿಯಲ್ಲಿ ಮರಳು ಗಣಿಗಾರಿಕೆ ನಡೆಸಲು ನಿಯಮಾನುಸಾರ ಅನುಮತಿ ನೀಡುವ ಮೂಲಕ ಮರಳು ಬಿಕ್ಕಟ್ಟು ನಿವಾರಣೆಗೆ ತ್ವರಿತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

2011ರ ನವೆಂಬರ್‌ 8ಕ್ಕೆ ಮೊದಲೇ ಸಾಂಪ್ರದಾಯಿಕ ಪದ್ಧತಿಯಡಿ ಮರಳು ಗಣಿಗಾರಿಕೆಯಲ್ಲಿ ತೊಡಗದ ಸಮುದಾಯಗಳಿಗೂ ಆದ್ಯತೆಯ ಮೇರೆಗೆ ಅನುಮತಿ ನೀಡಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಳ್ಳ ಬಹುದಾಗಿದೆ ಎಂದು ಕೇಂದ್ರದ ಪರಿಸರ ಮತ್ತು ಅರಣ್ಯ ಸಚಿವಾಲಯವು ರಾಜ್ಯ ಸರ್ಕಾರಕ್ಕೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT