ಮುಂಬೈ: ಸಂಜಯ್ ರಾವುತ್ ಮಾಡಿರುವ ₹ 2 ಸಾವಿರ ಕೋಟಿ ಡೀಲ್ ಆರೋಪಕ್ಕೆ ಬಿಜೆಪಿ ಭಾನುವಾರ ತಿರುಗೇಟು ನೀಡಿದೆ.
ಈ ಕುರಿತಂತೆ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ ಮಾತನಾಡಿ, ಸಂಜಯ್ ರಾವುತ್ ಅವರು ಮಹಾರಾಷ್ಟ್ರದ ರಾಹುಲ್ ಗಾಂಧಿ ಎಂದು ವ್ಯಂಗ್ಯವಾಡಿದ್ದಾರೆ.
ಸಿಎಂ ಏಕನಾಥ್ ಶಿಂಧೆ ಬಣಕ್ಕೆ ಶಿವಸೇನೆ ಪಕ್ಷದ ಹೆಸರು ಮತ್ತು ಬಿಲ್ಲು ಬಾಣದ ಚಿಹ್ನೆಯನ್ನು ನೀಡುವ ವಿಚಾರದಲ್ಲಿ ₹ 2 ಸಾವಿರ ಕೋಟಿ ಡೀಲ್ ನಡೆದಿದೆ ಎಂದು ಆರೋಪಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.