ಗಾಜಿಯಾಬಾದ್: ಕೃಷಿ ಕಾಯ್ದೆಗಳ ರದ್ದತಿಗೆ ಆಗ್ರಹಿಸಿ ದೆಹಲಿ – ಉತ್ತರ ಪ್ರದೇಶ ರಾಜ್ಯದ ಗಡಿಭಾಗದಲ್ಲಿ ಪ್ರತಿಭಟನೆ ನಡೆಸುತ್ತಿರುವ ಭಾರತೀಯ ಕಿಸಾನ್ ಒಕ್ಕೂಟದ ಮುಖಂಡ ರಾಕೇಶ್ ಟಿಕಾಯತ್ ಅವರನ್ನು ಶಿವಸೇನಾ ಸಂಸದ ಸಂಜಯ್ ರಾವುತ್ ಮಂಗಳವಾರ ಭೇಟಿ ಮಾಡಿದರು.
ಪ್ರತಿಭಟನಾ ಸ್ಥಳದಲ್ಲಿ ಕೇಂದ್ರ ಸರ್ಕಾರ ಭದ್ರತಾ ವ್ಯವಸ್ಥೆಯನ್ನು ಬಿಗಿಗೊಳಿಸುತ್ತಿರುವ ಹೊತ್ತಲ್ಲಿ, ಸಂಜಯ್ ರಾವುತ್ ಪ್ರತಿಭಟನಾ ಸ್ಥಳ ಗಾಜಿಪುರ ತಲುಪಿ, ಪ್ರತಿಭಟನಾ ನಿರತ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು ಇತರೆ ರೈತರ ಮುಖಂಡರನ್ನು ಭೇಟಿಯಾದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಜ.26ರ ಘಟನೆ ನಡೆದ ನಂತರ, ಸರ್ಕಾರ ರೈತ ಹೋರಾಟವನ್ನು ಹತ್ತಿಕ್ಕಲು ಪ್ರಯತ್ನಿಸಿದೆ. ಈ ಸಂದರ್ಭದಲ್ಲಿ ಪ್ರತಿಭಟನಾ ನಿರತ ರೈತರೊಟ್ಟಿಗೆ ನಿಲ್ಲಬೇಕಾದದ್ದು ನಮ್ಮ ಕರ್ತವ್ಯವಾಗಿದೆ. ಇಡೀ ಮಹಾರಾಷ್ಟ್ರ ರೈತರ ಹೋರಾಟಕ್ಕೆ ಬೆಂಬಲ ನೀಡುತ್ತಿದೆ’ ಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.