ಮುಂಬೈ: ನಟಿ ಕಂಗನಾ ರನೌತ್ ವಿರುದ್ಧ ಹಕ್ಕುಚ್ಯುತಿ ನೋಟಿಸ್ ದಾಖಲಿಸಿರುವುದಾಗಿ ಶಿವಸೇನಾ ಶಾಸಕ ಪ್ರತಾಪ್ ಸರ್ನಾಯಕ್ ಸೋಮವಾರ ಹೇಳಿದರು.
ಹಣ ಅಕ್ರಮ ವರ್ಗಾವಣೆ ಪ್ರಕರಣವೊಂದರಲ್ಲಿ ಜಾರಿ ನಿರ್ದೇಶನಾಯಲವು(ಇ.ಡಿ) ಸರ್ನಾಯಕ್ ಅವರನ್ನು ಇತ್ತೀಚೆಗೆ ವಿಚಾರಣೆಗೊಳಪಡಿಸಿತ್ತು. ಈ ಸಂದರ್ಭದಲ್ಲಿ ಟ್ವೀಟ್ ಮಾಡಿದ್ದ ಕಂಗನಾ, ಇ.ಡಿ ಶೋಧದ ವೇಳೆ ಪಾಕಿಸ್ತಾನದ ಕ್ರೆಡಿಟ್ ಕಾರ್ಡ್ ಒಂದನ್ನು ಸರ್ನಾಯಕ್ ಅವರಿಂದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ಉಲ್ಲೇಖಿಸಿದ್ದರು.
‘ಮಹಾರಾಷ್ಟ್ರ ವಿಧಾನಸಭೆ ಸಭಾಧ್ಯಕ್ಷರಿಗೆ ರನೌತ್ ವಿರುದ್ಧದ ಹಕ್ಕುಚ್ಯುತಿ ನೋಟಿಸ್ ನೀಡಿದ್ದೇನೆ’ ಎಂದು ಸರ್ನಾಯಕ್ ತಿಳಿಸಿದರು. ‘ಈ ಸುಳ್ಳು ಸುದ್ದಿಯು ನನ್ನ ಮಾನಕ್ಕೆ ಹಾನಿಯುಂಟುಮಾಡಿದೆ. ನಾನು ಹಾಗೂ ನನ್ನ ಕುಟುಂಬದವರು ಇ.ಡಿ ತನಿಖೆಗೆ ಸಹಕರಿಸುತ್ತಿದ್ದೇವೆ. ಇ.ಡಿ ಶೋಧದ ವೇಳೆ ಯಾವುದೇ ಅಕ್ರಮ ವಸ್ತುಗಳು ನನ್ನ ಬಳಿ ಪತ್ತೆಯಾಗಿಲ್ಲ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.