ADVERTISEMENT

ಸ್ಮಾರಕ ರಕ್ಷಣೆ ವಿಚಾರದಲ್ಲಿ ಕೇಂದ್ರ, ಉತ್ತರ ಪ್ರದೇಶಕ್ಕೆ 'ಸುಪ್ರೀಂ' ನೋಟಿಸ್‌

‘ಫತೇಪುರ್‌ ಸಿಕ್ರಿಯಲ್ಲಿರುವ ಸ್ಮಾರಕಗಳ ಸಂರಕ್ಷಿಸುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ’

ಪಿಟಿಐ
Published 17 ಜನವರಿ 2021, 10:47 IST
Last Updated 17 ಜನವರಿ 2021, 10:47 IST
ಫತೇಪುರ ಸಿಕ್ರಿ -ಎಎಫ್‌ಪಿ ಚಿತ್ರ
ಫತೇಪುರ ಸಿಕ್ರಿ -ಎಎಫ್‌ಪಿ ಚಿತ್ರ    

ನವದೆಹಲಿ: ಫತೇಪುರ್ ಸಿಕ್ರಿಯಲ್ಲಿರುವ ಪ್ರಾಚೀನ ಸ್ಮಾರಕಗಳನ್ನು ಸಂರಕ್ಷಿಸುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿರುವ ಅರ್ಜಿಯ ಬಗ್ಗೆ ಪ್ರತಿಕ್ರಿಯಿಸುವಂತೆ ಕೇಂದ್ರಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

‘ಹೆರಿಟೇಜ್‌ ಸಿಟಿ’ಯ ಸಮಗ್ರ ಅಭಿವೃದ್ಧಿಗಾಗಿ ಯೋಜನೆ ಜಾರಿಗೊಳಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಈ ಅರ್ಜಿಯಲ್ಲಿ ಕೋರಲಾಗಿದೆ.

ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬಡೆ ನೇತೃತ್ವದ ಪೀಠವು, ಈ ಅರ್ಜಿಗೆ ಪ್ರತಿಕ್ರಿಯಿಸುವಂತೆ ಕೇಂದ್ರ, ಉತ್ತರ ಪ್ರದೇಶ ಸರ್ಕಾರ, ಭಾರತೀಯ ಪುರಾತತ್ವ ಇಲಾಖೆಗೆ (ಎಎಸ್‌ಐ) ನೋಟಿಸ್‌ ಜಾರಿ ಮಾಡಿದೆ.

ADVERTISEMENT

ಫತೇಪುರ್ ಸಿಕ್ರಿ ನಿವಾಸಿ ಅಮರನಾಥ ಪರಾಶರ್ ಎಂಬುವರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.

‘ಪುರಾತನ ಸ್ಮಾರಕ ಮತ್ತು ಹೆರಿಟೇಜ್‌ ನಗರವನ್ನು ಸಂರಕ್ಷಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಸುಪ್ರೀಂಕೋರ್ಟ್‌16 ವರ್ಷಗಳ ಹಿಂದೆ ಸೂಚನೆ ನೀಡಿತ್ತು. ಆದರೆ ಸಂಸ್ಥೆಗಳ ನಡುವಿನ ಹೊಂದಾಣಿಕೆ ಕೊರತೆಯಿಂದಾಗಿ ಕೆಲಸಗಳು ಹಾಗೇ ಬಾಕಿ ಉಳಿದಿವೆ. ಅಲ್ಲದೆ ಅಲ್ಲಿ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಇದರಿಂದ ಸ್ಮಾರಕಗಳು ನಶಿಸುತ್ತಿವೆ. ಅಧಿಕಾರಿಗಳು ನ್ಯಾಯಾಲಯದ ಆದೇಶವನ್ನು ಪಾಲಿಸುವಲ್ಲಿ ನಿರ್ಲಕ್ಷ್ಯ ತೋರಿದ್ದಾರೆ’ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.