ADVERTISEMENT

ಮರ್ಯಾದಗೇಡು ಹತ್ಯೆ: ಆರೋಪಿಗೆ ಕೋರ್ಟ್‌ ನೀಡಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ

ಪಿಟಿಐ
Published 12 ಜುಲೈ 2021, 8:25 IST
Last Updated 12 ಜುಲೈ 2021, 8:25 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ‘ಮರ್ಯಾದಗೇಡು ಹತ್ಯೆ‘ ಪ್ರಕರಣವೊಂದರ ಆರೋಪಿಗೆ ರಾಜಸ್ಥಾನ ಹೈಕೋರ್ಟ್‌ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್‌ ಸೋಮವಾರ ರದ್ದುಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ನೇತೃತ್ವದ ನ್ಯಾಯಪೀಠವು ಪ್ರಕರಣದ ಆರೋಪಿ ಮುಖೇಶ್ ಚೌಧರಿಯನ್ನು ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಕೇಳಿದೆ.

ರಾಜಸ್ಥಾನದ ಜೈಪುರದ ಯುವತಿ ಮಮತಾ, ಕೇರಳದ ಯುವಕ ಅಮಿತ್ ನಾಯರ್ ಅವರನ್ನು 2015ರಲ್ಲಿ ವಿವಾಹವಾಗಿದ್ದರು. ಪೋಷಕರ ಆಶಯಕ್ಕೆ ವಿರುದ್ಧವಾಗಿ ಅನ್ಯಜಾತಿಯ ಹುಡುಗನನ್ನು ವಿವಾಹವಾಗಿದ್ದಾಳೆ ಎಂಬ ಕಾರಣಕ್ಕೆ ಮಮತಾಳ ಸಹೋದರ ಮುಖೇಶ್ ಚೌಧರಿ, ಅಮಿತ್‌ ನಾಯರ್‌ನನ್ನು 2017ರಲ್ಲಿ ಹತ್ಯೆ ಮಾಡಿದ್ದ ಎಂದು ಆರೋಪಿಸಲಾಗಿದೆ.

ADVERTISEMENT

ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮುಖೇಶ್‌ ಚೌಧರಿಗೆ ರಾಜಸ್ಥಾನ ಹೈಕೋರ್ಟ್‌ ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ, ಆತನ ಸಹೋದರಿ ಮಮತಾ ನಾಯರ್‌, ಸುಪ್ರೀಂ ಕೋರ್ಟ್‌ನಲ್ಲಿ ಮನವಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ಮುಖೇಶ್ ಚೌಧರಿಗೆ ವಿಚಾರಣಾ ನ್ಯಾಯಾಲಯದ ಎದುರು ಶರಣಾಗುವಂತೆ ಸೂಚಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.