ADVERTISEMENT

‘ಇಂಡಿಯಾ’ ಪ್ರಶ್ನಿಸಿ ಅರ್ಜಿ: ವಿಚಾರಣೆಗೆ ‘ಸುಪ್ರೀಂ' ನಕಾರ

​ಪ್ರಜಾವಾಣಿ ವಾರ್ತೆ
Published 11 ಆಗಸ್ಟ್ 2023, 15:30 IST
Last Updated 11 ಆಗಸ್ಟ್ 2023, 15:30 IST
   

ನವದೆಹಲಿ: ವಿರೋಧ ಪಕ್ಷಗಳು ತಮ್ಮ ಮೈತ್ರಿಕೂಟಕ್ಕೆ ‘ಇಂಡಿಯಾ’ ಎಂದು ಹೆಸರಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ (ಪಿಐಎಲ್‌) ವಿಚಾರಣೆಗೆ ಸುಪ್ರೀಂ ಕೋರ್ಟ್‌ ಶುಕ್ರವಾರ ನಿರಾಕರಿಸಿದೆ.

ವಿರೋಧ ಪಕ್ಷಗಳು ಚುನಾವಣಾ ನೀತಿಯನ್ನು ಉಲ್ಲಂಘಿಸಿದ್ದರೆ ಚುನಾವಣಾ ಆಯೋಗದ ಮೊರೆ ಹೋಗಿ ಎಂದಿರುವ ನ್ಯಾಯಮೂರ್ತಿಗಳಾದ ಎಸ್‌.ಕೆ. ಕೌಲ್‌ ಮತ್ತು ಸುಧಾಂಶು ಧುಲಿಯಾ ಅವರಿದ್ದ ಪೀಠವು, ಇದು ಪ್ರಚಾರಕ್ಕಾಗಿ ಸಲ್ಲಿಸಿರುವ ಅರ್ಜಿ ಎಂದು ಅಭಿಪ್ರಾಯಪಟ್ಟಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT