ADVERTISEMENT

ತೇಲ್ತುಂಬ್ಡೆಗೆ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದ ಎನ್‌ಐಎ ಅರ್ಜಿ ವಜಾ

ಪಿಟಿಐ
Published 25 ನವೆಂಬರ್ 2022, 13:45 IST
Last Updated 25 ನವೆಂಬರ್ 2022, 13:45 IST
ಆನಂದ್‌ ತೇಲ್ತುಂಬ್ಡೆ
ಆನಂದ್‌ ತೇಲ್ತುಂಬ್ಡೆ   

ನವದೆಹಲಿ: ಎಲ್ಗಾರ್‌ ಪರಿಷತ್– ಮಾವೊ ಸಂಪರ್ಕ ಪ್ರಕರಣದಲ್ಲಿ ಚಿಂತಕ, ಸಾಮಾಜಿಕ ಕಾರ್ಯಕರ್ತ ಆನಂದ್ ತೇಲ್ತುಂಬ್ಡೆ ಅವರಿಗೆ ಬಾಂಬೆ ಹೈಕೋರ್ಟ್ ಜಾಮೀನು ನೀಡಿದ್ದನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ಸಂಸ್ಥೆಯು (ಎನ್‌ಐಎ) ಸಲ್ಲಿಸಿದ್ದ ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್ ವಜಾಗೊಳಿಸಿದೆ.

ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಮತ್ತು ನ್ಯಾಯಮೂರ್ತಿ ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠವು, ‘ತೇಲ್ತುಂಬ್ಡೆ ಅವರಿಗೆ ಜಾಮೀನು ನೀಡಿರುವ ಬಾಂಬೆ ಹೈಕೋರ್ಟ್ ಆದೇಶದಲ್ಲಿ ಮಧ್ಯೆ ಪ್ರವೇಶಿಸುವುದಿಲ್ಲ’ ಎಂದು ಹೇಳಿದೆ.

‘ಈ ಅರ್ಜಿಯನ್ನಷ್ಟೇ ವಜಾಗೊಳಿಸಲಾಗಿದೆ. ಆದರೆ ಹೈಕೋರ್ಟ್‌ನ ತೀರ್ಪಿನಲ್ಲಿ ತಿಳಿಸಲಾದ ಮಾಹಿತಿಯು ವಿಚಾರಣೆ ವೇಳೆಯಲ್ಲಿನ ಅಂತಿಮ ತೀರ್ಮಾನವೆಂಬಂತೆ ಪರಿಗಣಿಸಬೇಕಾಗಿಲ್ಲ’ ಎಂದು ಪೀಠ ಹೇಳಿತು.

ADVERTISEMENT

ಇದೇ 18ರಂದು ಬಾಂಬೆ ಹೈಕೋರ್ಟ್‌ ತೇಲ್ತುಂಬ್ಡೆ ಅವರಿಗೆ ಜಾಮೀನು ಮಂಜೂರು ಮಾಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.