ADVERTISEMENT

ಧಾರ್ಮಿಕ, ಲಿಂಗತ್ವ ತಟಸ್ಥ ಕಾನೂನು: ಸಂಸತ್ತಿಗೆ ನಿರ್ದೇಶಿಸಲು ಬರುವುದಿಲ್ಲ:

ಪಿಟಿಐ
Published 29 ಮಾರ್ಚ್ 2023, 13:40 IST
Last Updated 29 ಮಾರ್ಚ್ 2023, 13:40 IST
   

ನವದೆಹಲಿ (ಪಿಟಿಐ): ಮದುವೆ, ವಿಚ್ಛೇದನ, ಉತ್ತರಾಧಿಕಾರ ಹಾಗೂ ಜೀವನಾಂಶಕ್ಕೆ ಸಂಬಂಧಿಸಿದಂತೆ ಧಾರ್ಮಿಕ ಹಾಗೂ ಲಿಂಗತ್ವ ತಟಸ್ಥ ಕಾನೂನು ರೂಪಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬುಧವಾರ ನಡೆಸಿದ ಸುಪ್ರೀಂ ಕೋರ್ಟ್‌, ‘ಕಾನೂನು ರೂಪಿಸುವಂತೆ ಸಂಸತ್ತಿಗೆ ನಿರ್ದೇಶನ ನೀಡಲು ಬರುವುದಿಲ್ಲ’ ಎಂದು ಹೇಳಿದೆ.

‘ಇಂಥ ವಿಷಯಗಳು ಸಂಸತ್ತಿಗೆ ಸಂಬಂಧಿಸಿದವು. ಆದ್ದರಿಂದ ನಾವು ಈ ವಿಷಯಗಳ ಕುರಿತು ನಿರ್ದೇಶನ ನೀಡಲು ಸಾಧ್ಯವಿಲ್ಲ. ಇದು ನಮ್ಮ ಕಾರ್ಯವ್ಯಾಪ್ತಿಯಲ್ಲ’ ಎಂದು ಹೇಳಿದ ಮುಖ್ಯ ನ್ಯಾಯಮೂರ್ತಿಗಳಾದ ಡಿ.ವೈ. ಚಂದ್ರಚೂಡ್‌, ನ್ಯಾಯಮೂರ್ತಿಗಳಾದ ಪಿ.ಎಸ್‌. ನರಸಿಂಹ ಹಾಗೂ ಜೆ.ಬಿ. ಪಾರ್ದೀವಾಲ ಅವರಿದ್ದ ಪೀಠವು ಅರ್ಜಿಗಳನ್ನು ವಜಾ ಮಾಡಿತು.

ಧಾರ್ಮಿಕ ಹಾಗೂ ಲಿಂಗತ್ವ ತಟಸ್ಥ ಕಾನೂನು ರೂಪಿಸುವಂತೆ ಕೋರಿ ವಕೀಲ ಅಶ್ವಿನಿ ಉಪಾಧ್ಯಾಯ ಅವರು ಐದು ಪ್ರತ್ಯೇಕ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಸಲ್ಲಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.