ನವದೆಹಲಿ: ಮಣಿಪಾಲ್ ಎಜುಕೇಷನ್ ಹಾಗೂ ಮೆಡಿಕಲ್ ಗ್ರೂಪ್ಗೆ ಹಣ ವಂಚಿಸಿದ್ದ ಆರೋಪಿ ಹಾಗೂ ಅದೇ ಗ್ರೂಪ್ನ ಮಾಜಿ ಉಪ ಪ್ರಧಾನ ವ್ಯವಸ್ಥಾಪಕ ಸಂದೀಪ್ ಗುರುರಾಜ್ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.
ಸರ್ಕಾರಿ ಜಮೀನು ಖರೀದಿಗೆ ಸಂಬಂಧಿಸಿದಂತೆ ₹ 1.74 ಕೋಟಿ ಅವ್ಯವಹಾರದ ಮೂರನೇ ಪ್ರಕರಣದಲ್ಲಿ ಸಂದೀಪ್ ಅವರಿಗೆ ಜಾಮೀನು ನೀಡಲಾಗಿದೆ.
ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಹೇಮಂತ್ ಗುಪ್ತಾ ಅವರನ್ನೊಳಗೊಂಡ ನ್ಯಾಯಪೀಠವು, ‘ಈಗಾಗಲೇ ಚಾರ್ಜ್ಶೀಟ್ ದಾಖಲಾಗಿದೆ. ಕರ್ನಾಟಕ ಹೈಕೋರ್ಟ್ನ 2021ರ ಜ. 18ರ ಆದೇಶ ಪ್ರಕಾರ, ಆರೋಪಿಗೆ ಈಗಾಗಲೇ ₹ 75 ಕೋಟಿ ಮೊತ್ತದ ವಂಚನೆಗೆ ಸಂಬಂಧಿಸಿದಂತೆ ಜಾಮೀನು ನೀಡಲಾಗಿದೆ ಎಂಬುದನ್ನು ನ್ಯಾಯಾಲಯವು ಗಮನಿಸಿದೆ. ಹಾಗಾಗಿ, ಆರೋಪಿಯ ಜಾಮೀನನ್ನು ವಿಸ್ತರಿಸಬಹುದಾಗಿದೆ’ ಎಂದು ಅಭಿಪ್ರಾಯಪಟ್ಟಿತು.
ಮಣಿಪಾಲ್ ಎಜುಕೇಷನ್ ಹಾಗೂ ಮೆಡಿಕಲ್ ಗ್ರೂಪ್ಗೆ ₹ 75 ಕೋಟಿ ವಂಚಿಸಿರುವ ಆರೋಪಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.