ADVERTISEMENT

ಫೆ. 26ರಿಂದ ’ಸುಪ್ರೀಂ‘ನಲ್ಲಿ ರಾಮಜನ್ಮಭೂಮಿ ವಿವಾದ ವಿಚಾರಣೆ

ಪಿಟಿಐ
Published 20 ಫೆಬ್ರುವರಿ 2019, 12:04 IST
Last Updated 20 ಫೆಬ್ರುವರಿ 2019, 12:04 IST
   

ನವದೆಹಲಿ: ಅಯೋಧ್ಯೆ ರಾಮಜನ್ಮಭೂಮಿ– ಬಾಬರಿ ಮಸೀದಿ ಭೂ ವಿವಾದದ ವಿಚಾರಣೆಯನ್ನು ಇದೇ ಫೆಬ್ರುವರಿ 26ರಂದು ನಡೆಸಲು ಸುಪ್ರೀಂಕೋರ್ಟ್‌ ಬುಧವಾರ ತೀರ್ಮಾನಿಸಿದೆ.

ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯಿ ನೇತೃತ್ವದ ಐವರು ನ್ಯಾಯಮೂರ್ತಿಗಳನ್ನು ಒಳಗೊಂಡ ಸಾಂವಿಧಾನಿಕ ಪೀಠವು ಇದರ ವಿಚಾರಣೆ ನಡೆಸಲಿದೆ.

ಕಳೆದ ಜನವರಿ 29ರಂದು ಆರಂಭವಾಗಬೇಕಿದ್ದ ವಿಚಾರಣೆಯನ್ನು ಪೀಠದಲ್ಲಿದ್ದ ಐವರು ನ್ಯಾಯಮೂರ್ತಿಗಳ ಪೈಕಿ ಒಬ್ಬರಾದ ಎಸ್‌.ಎ.ಬೋಬ್ಡೆ ಅವರ ಅಲಭ್ಯತೆಯಿಂದಾಗಿ ಜ.27ರಂದು ರದ್ದುಪಡಿಸಲಾಗಿತ್ತು.

ADVERTISEMENT

ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್‌, ಅಶೋಕ್‌ ಭೂಷಣ್‌ ಮತ್ತು ಎಸ್‌.ಎ.ನಜೀರ್‌ ಅವರು ಪೀಠದ ಉಳಿದ ಸದಸ್ಯರಾಗಿದ್ದಾರೆ.

ಕಕ್ಷಿದಾರರಾದ ಸುನ್ನಿ ವಕ್ಫ್‌ ಮಂಡಳಿ, ನಿರ್ಮೋಹಿ ಅಖಾಡ ಮತ್ತು ರಾಮ್‌ ಲಲ್ಲಾಗೆ 2.77 ಎಕರೆ ಭೂಮಿಯನ್ನು ಸಮಾನವಾಗಿ ಹಂಚಿಕೆ ಮಾಡುವಂತೆ 2010ರಲ್ಲಿ ಅಲಹಾಬಾದ್‌ ಹೈಕೋರ್ಟ್‌ ನೀಡಿದ ತೀರ್ಪಿನ ವಿರುದ್ಧ ಸಲ್ಲಿಕೆಯಾಗಿರುವ ಮೇಲ್ಮನವಿ ಮತ್ತು ನಾಲ್ಕು ಸಿವಿಲ್‌ ಅರ್ಜಿಗಳನ್ನು ಸಾಂವಿಧಾನಿಕ ಪೀಠ ವಿಚಾರಣೆ ನಡೆಸಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.