ADVERTISEMENT

ಆಸ್ತಿ ಮಾಹಿತಿ ಮರೆಮಾಚಿದ ಆರೋಪ: ಪ್ರಜ್ವಲ್‌ಗೆ ನೋಟಿಸ್‌

​ಪ್ರಜಾವಾಣಿ ವಾರ್ತೆ
Published 2 ಮಾರ್ಚ್ 2020, 19:47 IST
Last Updated 2 ಮಾರ್ಚ್ 2020, 19:47 IST
ಪ್ರಜ್ವಲ್‌ ರೇವಣ್ಣ
ಪ್ರಜ್ವಲ್‌ ರೇವಣ್ಣ   

ನವದೆಹಲಿ: ಲೋಕಸಭೆ ಚುನಾವಣೆ ಸಂದರ್ಭ ಸಲ್ಲಿಸಲಾದ ಪ್ರಮಾಣಪತ್ರದಲ್ಲಿ ಆಸ್ತಿ ಕುರಿತ ಮಾಹಿತಿ ಮರೆಮಾಚಲಾಗಿದೆ ಎಂಬ ಆರೋಪ ಎದುರಿಸುತ್ತಿರುವ ಹಾಸನದ ಜೆಡಿಎಸ್‌ ಸಂಸದ ಪ್ರಜ್ವಲ್‌ ರೇವಣ್ಣ ಅವರಿಗೆ ಸುಪ್ರೀಂ ಕೋರ್ಟ್‌ ಸೋಮವಾರ ನೋಟಿಸ್‌ ಜಾರಿ ಮಾಡಿದೆ.

ಪ್ರಕರಣದ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬಡೆ ನೇತೃತ್ವದ ಪೀಠ, ನಾಲ್ಕು ವಾರಗಳೊಳಗೆ ಪ್ರತಿಕ್ರಿಯೆ ನೀಡುವಂತೆಪ್ರಜ್ವಲ್‌ ಅವರಿಗೆ ಸೂಚಿಸಿ ಈ ನೋಟಿಸ್‌ ಜಾರಿ ಮಾಡಿದೆ. ತಮ್ಮ ಅರ್ಜಿ ವಜಾಗೊಳಿಸಿ ಜನವರಿ 17ರಂದು ರಾಜ್ಯ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ಪರಾಜಿತ ಅಭ್ಯರ್ಥಿ, ಬಿಜೆಪಿಯ ಎ.ಮಂಜು ಮೇಲ್ಮನವಿ ಸಲ್ಲಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT