ADVERTISEMENT

‘ಸುಪ್ರೀಂ’ ನ್ಯಾಯಮೂರ್ತಿ ಶಾ ಅಸ್ವಸ್ಥ: ದೆಹಲಿಗೆ ಏರ್‌ಲಿಫ್ಟ್‌

ಪಿಟಿಐ
Published 16 ಜೂನ್ 2022, 11:18 IST
Last Updated 16 ಜೂನ್ 2022, 11:18 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ನವದೆಹಲಿ: ಹಿಮಾಚಲ ಪ್ರದೇಶಕ್ಕೆ ಭೇಟಿ ನೀಡಿದ್ದ ಸುಪ್ರೀಂಕೋರ್ಟ್‌ ನ್ಯಾಯಮೂರ್ತಿ ಎಂ.ಆರ್‌.ಶಾ ಅವರು ಗುರುವಾರ ಅಸ್ವಸ್ಥಗೊಂಡ ಕಾರಣ ಅವರನ್ನು ಏರ್‌ ಆಂಬುಲೆನ್ಸ್‌ ಮೂಲಕ ದೆಹಲಿಗೆ ಕರೆತರಲಾಗಿದೆ.

ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಮುಖ್ಯನ್ಯಾಯಮೂರ್ತಿ ಎನ್‌.ವಿ.ರಮಣ ಅವರು ನ್ಯಾಯಮೂರ್ತಿ ಶಾ ಹಾಗೂ ಗೃಹ ಸಚಿವಾಲಯದ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿದ್ದರಲ್ಲದೇ, ಅವರನ್ನು ದೆಹಲಿಗೆ ಕರೆತಂದು, ಚಿಕಿತ್ಸೆಯ ವ್ಯವಸ್ಥೆಯನ್ನೂ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT