ADVERTISEMENT

ಸಿವಿಲ್‌ ನ್ಯಾಯಾಧೀಶರ ಹುದ್ದೆಗಳ ಭರ್ತಿ: ಆಂಧ್ರಪ್ರದೇಶಕ್ಕೆ ’ಸುಪ್ರೀಂ‘ ನೋಟಿಸ್‌

ಪಿಟಿಐ
Published 30 ಡಿಸೆಂಬರ್ 2020, 10:34 IST
Last Updated 30 ಡಿಸೆಂಬರ್ 2020, 10:34 IST
ಸುಪ್ರೀಂಕೋರ್ಟ್‌
ಸುಪ್ರೀಂಕೋರ್ಟ್‌   

ನವದೆಹಲಿ: ಸಿವಿಲ್ ನ್ಯಾಯಾಧೀಶರ ಹುದ್ದೆಗಳ ಭರ್ತಿಗೆ ನಡೆಸುವ ಪರೀಕ್ಷೆಗೆ ಹಾಜರಾಗಲು ಕಡ್ಡಾಯವಾಗಿ ಮೂರು ವರ್ಷಗಳ ಕಾಲ ವಕೀಲರಾಗಿ ಕಾರ್ಯ ನಿರ್ವಹಿಸಿರಬೇಕು ಎಂಬ ಷರತ್ತನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗೆ ಪ್ರತಿಕ್ರಿಯಿಸುವಂತೆ ಆಂಧ್ರಪ್ರದೇಶ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಸೂಚಿಸಿದೆ.

ನ್ಯಾಯಮೂರ್ತಿ ಇಂದಿರಾ ಬ್ಯಾನರ್ಜಿ ಮತ್ತು ಅನಿರುದ್ಧ್‌ ಭೋಸ್‌ ಅವರ ಪೀಠವು ಅರ್ಜಿಯನ್ನು ವಿಚಾರಣೆಗೆ ಅಂಗೀಕರಿಸಿದ್ದು, ಈ ಸಂಬಂಧ ಆಂಧ್ರಪ್ರದೇಶ ಹೈಕೋರ್ಟ್‌ನ ರಿಜಿಸ್ಟ್ರಾರ್‌ಗೆ (ನೇಮಕಾತಿ) ನೋಟಿಸ್‌ ಜಾರಿ ಮಾಡಿದೆ.

ಆರ್‌.ವೆಂಕಟೇಶ್‌ ಎಂಬವರು ಸುಪ್ರೀಂಕೋರ್ಟ್‌ನಲ್ಲಿ ಈ ಅರ್ಜಿ ಸಲ್ಲಿಸಿದ್ದಾರೆ.

ADVERTISEMENT

ಡಿಸೆಂಬರ್‌ 3 ರಂದು ಸಿವಿಲ್ ನ್ಯಾಯಾಧೀಶರ (ಕಿರಿಯ ವಿಭಾಗ) ಹುದ್ದೆಗಳ ಸಾಮಾನ್ಯ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು 2007ರ ಆಂಧ್ರಪ್ರದೇಶ ರಾಜ್ಯ ನ್ಯಾಯಾಂಗ (ಸೇವೆ ಮತ್ತು ಕೇಡರ್) ನಿಯಮಗಳು ಪ್ರಕಾರ ನಡೆಸಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.