ADVERTISEMENT

ರಸ್ತೆ ನಿರ್ಮಾಣ ಹಂತದಲ್ಲೇ ಕೇಬಲ್ ಅಳವಡಿಕೆ‌ ಕಡ್ಡಾಯಗೊಳಿಸಿ: ‘ಸುಪ್ರೀಂ‘ಗೆ ಅರ್ಜಿ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 14:04 IST
Last Updated 17 ಮಾರ್ಚ್ 2021, 14:04 IST
ಸುಪ್ರೀಂ ಕೋರ್ಟ್‌
ಸುಪ್ರೀಂ ಕೋರ್ಟ್‌   

ನವದೆಹಲಿ: ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಇತರ ರಸ್ತೆಗಳಲ್ಲಿ ಪದೇ ಪದೇ ಅಗೆಯುವುದು ಹಾಗೂ ಆರ್ಥಿಕ ಹೊರೆಯನ್ನು ತಪ್ಪಿಸಲು ರಸ್ತೆ ನಿರ್ಮಾಣ ಹಂತದಲ್ಲಿಯೇ ಎಲ್ಲಾ ರೀತಿಯ ಉಪಯೋಗಕ್ಕೆ ಅನುಕೂಲವಾಗುವಂತೆ ಸಾಮಾನ್ಯ ಕೇಬಲ್‌ವೊಂದನ್ನು ಕಡ್ಡಾಯವಾಗಿ ಆಳವಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಬೇಕು ಎಂದು ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಬಗ್ಗೆ ಪರಿಶೀಲಿಸಲಾಗುವುದು ಎಂದು ಸುಪ್ರೀಂ ಕೋರ್ಟ್‌ ಬುಧವಾರ ತಿಳಿಸಿದೆ.

‘ಇದು ಉತ್ತಮ ಆಲೋಚನೆ‘ ಎಂದು ಶ್ಲಾಘಿಸಿರುವ ಮುಖ್ಯನ್ಯಾಯಮೂರ್ತಿ ಎಸ್‌. ಎ. ಬೊಬಡೆ, ನ್ಯಾಯಮೂರ್ತಿಗಳಾದ ಎ.ಎಸ್‌. ಬೋಪಣ್ಣ ಹಾಗೂ ವಿ.ರಾಮಸುಬ್ರಹ್ಮಣಿಯಂ ಅವರನ್ನೊಳಗೊಂಡ ಪೀಠವು, ಕೇಂದ್ರ ಸರ್ಕಾರ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಹಾಗೂ ಇತರರಿಗೆ ನೋಟಿಸ್ ಜಾರಿ ಮಾಡಿದೆ.

ಹರಿಪ್ರಿಯಾ ಪಟೇಲ್‌ ಎಂಬುವವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಅರ್ಜಿಯಲ್ಲಿ ಅವರ ಮನೆ ರಾಷ್ಟ್ರೀಯ ಹೆದ್ದಾರಿ 10ರಲ್ಲಿದ್ದು, ಹೆದ್ದಾರಿಗಳಲ್ಲಿ ಪದೇ ಪದೇ ರಸ್ತೆ ರಿಪೇರಿ, ಅಗೆಯುವುದು, ಗುಂಡಿ ತೋಡುವುದರಿಂದ ಅನೇಕ ಅಪಘಾತಗಳು ಸಂಭವಿಸುತ್ತಿರುತ್ತವೆ. ಸಂಚಾರ ಅಸ್ತವ್ಯಸ್ತ ಆಗುತ್ತದೆ. ಸಾರ್ವಜನಿಕ ಹಣವೂ ಪೋಲು ಎಂದು ಹೇಳಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.