ADVERTISEMENT

ಸಾರ್ವಜನಿಕ ರಜೆ ಘೋಷಣೆ: ಕೇಂದ್ರ, ರಾಜ್ಯಗಳಿಗೆ‌ ಸುಪ್ರೀಂ ನೋಟಿಸ್

​ಪ್ರಜಾವಾಣಿ ವಾರ್ತೆ
Published 18 ಜನವರಿ 2021, 11:41 IST
Last Updated 18 ಜನವರಿ 2021, 11:41 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ: ಗುರು ಗೋವಿಂದ ಸಿಂಗ್ ಅವರ ಜಯಂತಿ ನಿಮಿತ್ತ ಸಾರ್ವಜನಿಕ ರಜೆ ಘೋಷಿಸಬೇಕು ಎಂಬ ಅರ್ಜಿಗೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ಸೋಮವಾರ ಕೇಂದ್ರ ಮತ್ತು ರಾಜ್ಯಗಳಿಗೆ ನೋಟಿಸ್‌ ಜಾರಿ ಮಾಡಿದೆ.

ಸಿಖ್‌ ಸಮುದಾಯದ ಸಂಘಟನೆ ಆಲ್‌ ಇಂಡಿಯಾ ಶಿರೋಮಣಿ ಸಿಂಗ್ ಸಭಾ ಈ ಸಂಬಂಧ ಅರ್ಜಿ ಸಲ್ಲಿಸಿದ್ದು, ಸಾರ್ವಜನಿಕ ರಜೆ ಘೋಷಿಸುವ ಸಂಬಂಧ ದೇಶವ್ಯಾಪಿ ಏಕರೂಪ ನೀತಿ ಜಾರಿಗೊಳಿಸಬೇಕು ಎಂದು ಮನವಿ ಮಾಡಿತ್ತು.

ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬಡೆ ನೇತೃತ್ವದ ಪೀಠವು, ಈ ಕುರಿತು ಪ್ರತಿಕ್ರಿಯೆ ದಾಖಲಿಸಲು ಸೂಚಿಸಿ ನೋಟಿಸ್ ಜಾರಿ ಮಾಡಿತು.

ADVERTISEMENT

ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಈ ಸಂಬಂಧ ಕೇಂದ್ರದ ನಿಲುವು ತಿಳಿಯುವುದಾಗಿ ತಿಳಿಸಿದರು. ಪೀಠ ಅರ್ಜಿಯ ವಿಚಾರಣೆಯನ್ನು ಇದೇ 29ಕ್ಕೆ ನಿಗದಿಪಡಿಸಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.