ನವದೆಹಲಿ (ಪಿಟಿಐ): ಚೆಕ್ ಬೌನ್ಸ್ ಪ್ರಕರಣಗಳ ತ್ವರಿತ ವಿಲೇವಾರಿಗೆ 5 ರಾಜ್ಯಗಳಲ್ಲಿ ನಿವೃತ್ತ ನ್ಯಾಯಾಧೀಶರನ್ನು ಒಳಗೊಂಡ ವಿಶೇಷ ನ್ಯಾಯಾಲಯ ರಚಿಸುವಂತೆ ಸುಪ್ರೀಂ ಕೋರ್ಟ್ ಗುರುವಾರ ಸೂಚನೆ ನೀಡಿದೆ.
ಈ ಕುರಿತ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಲ್.ನಾಗೇಶ್ವರ ರಾವ್, ಬಿ.ಆರ್.ಗವಾಯಿ ಮತ್ತು ಎಸ್.ರವೀಂದ್ರ ಭಟ್ ಅವರನ್ನು ಒಳಗೊಂಡ ಪೀಠ, ಮಹಾರಾಷ್ಟ್ರ, ದೆಹಲಿ, ಗುಜರಾತ್, ಉತ್ತರ ಪ್ರದೇಶ ಮತ್ತು ರಾಜಸ್ಥಾನಗಳಲ್ಲಿ ದೊಡ್ಡ ಪ್ರಮಾಣದ ಚೆಕ್ ಬೌನ್ಸ್ ಪ್ರಕರಣಗಳ ವಿಚಾರಣೆ ಬಾಕಿ ಇದೆ. ಹೀಗಾಗಿ ಈ ರಾಜ್ಯಗಳಲ್ಲಿ ಪ್ರಸಕ್ತ ವರ್ಷ ಸೆ.1ರ ಒಳಗಾಗಿ ವಿಶೇಷ ನ್ಯಾಯಾಲಯ ರಚಿಸಬೇಕು ಎಂದು ಗಡುವು ನೀಡಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.