ADVERTISEMENT

ತಿಹಾರ್‌ನಿಂದ ಸುಕೇಶ್‌ ದಂಪತಿ ಸ್ಥಳಾಂತರ ‘ಸುಪ್ರೀಂ’ ಆದೇಶ

ಪಿಟಿಐ
Published 23 ಆಗಸ್ಟ್ 2022, 11:33 IST
Last Updated 23 ಆಗಸ್ಟ್ 2022, 11:33 IST
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್   

ನವದೆಹಲಿ (ಪಿಟಿಐ): ವಂಚಕ ಸುಕೇಶ್ ಚಂದ್ರಶೇಖರ್‌ ಮತ್ತು ಆತನ ಪತ್ನಿಯನ್ನು ತಿಹಾರ್ ಕಾರಾಗೃಹದಿಂದ ನಗರದ ಮಂಡೋಲಿ ಕಾರಾಗೃಹಕ್ಕೆ ಒಂದು ವಾರದಲ್ಲಿ ಸ್ಥಳಾಂತರಿಸಲು ಸುಪ್ರೀಂ ಕೋರ್ಟ್‌ ಮಂಗಳವಾರ ಆದೇಶಿಸಿದೆ.

ಜೀವಬೆದರಿಕೆ ಹಿನ್ನೆಲೆಯಲ್ಲಿ ನಮ್ಮನ್ನು ಸ್ಥಳಾಂತರಿಸಬೇಕು ಎಂದು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ಎಸ್‌.ಆರ್.ಭಟ್‌ ಮತ್ತು ಸುಧಾನ್ಷು ಧುಲಿಯಾ ಅವರಿದ್ದ ನ್ಯಾಯಪೀಠ ಈ ಆದೇಶವನ್ನು ನೀಡಿತು.

ಹಣ ಅಕ್ರಮ ವರ್ಗಾವಣೆ ಮತ್ತು ಹಲವರಿಗೆ ವಂಚಿಸಿದ್ದ ಆರೋಪದಡಿ ಚಂದ್ರಶೇಖರ್ ಅವರನ್ನು ಬಂಧಿಸಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.