ADVERTISEMENT

ಸರ್ಕಾರಿ ಬಂಗಲೆ ಖಾಲೆ ಮಾಡಲು ತೇಜಸ್ವಿಗೆ ‘ಸುಪ್ರೀಂ’ ಸೂಚನೆ

ಪಿಟಿಐ
Published 8 ಫೆಬ್ರುವರಿ 2019, 16:13 IST
Last Updated 8 ಫೆಬ್ರುವರಿ 2019, 16:13 IST
   

ನವದೆಹಲಿ: ಉಪಮುಖ್ಯಮಂತ್ರಿಗಳ ಅಧಿಕೃತ ನಿವಾಸ ಖಾಲಿ ಮಾಡುವಂತೆ ಪಟ್ನಾ ಹೈಕೋರ್ಟ್‌ ನೀಡಿದ್ದ ತೀರ್ಪು ಪ್ರಶ್ನಿಸಿ ತೇಜಸ್ವಿ ಯಾದವ್‌ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್‌ ವಜಾಗೊಳಿಸಿದೆ.

ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಆದೇಶಿಸಿರುವ ಕೋರ್ಟ್‌, ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡಿದ್ದಕ್ಕಾಗಿ ₹ 50 ಸಾವಿರ ದಂಡ ವಿಧಿಸಿದೆ.

ನ್ಯಾಯಮೂರ್ತಿಗಳಾದ ರಂಜನ್ ಗೊಗೊಯಿ, ದೀಪಕ್‌ ಗುಪ್ತಾ, ಸಂಜೀವ್‌ ಗುಪ್ತಾ ಅವರನ್ನೊಳಗೊಂಡ ಪೀಠ ಈ ತೀರ್ಪು ನೀಡಿದೆ.

ADVERTISEMENT

ನಿತೀಶ್‌ ಕುಮಾರ್‌ ನೇತೃತ್ವದ ಸರ್ಕಾರದಲ್ಲಿ ಉಪಮುಖ್ಯಮಂತ್ರಿಯಾಗಿದ್ದ ವೇಳೆ ತೇಜಸ್ವಿ ಯಾದವ್‌ಗೆ ಈ ಬಂಗಲೆ ಮಂಜೂರಾಗಿತ್ತು.

ನಿತೀಶ್ ಅವರು ಆರ್‌ಜೆಡಿಯೊಂದಿಗೆ ಮೈತ್ರಿ ತೊರೆದು ಬಿಜೆಪಿಯೊಂದಿಗೆ ಸೇರಿ ಹೊಸ ಸರ್ಕಾರ ರಚಿಸಿದ್ದರು. ಆಗ ಈ ನಿವಾಸವನ್ನು ಉಪಮುಖ್ಯಮಂತ್ರಿ ಸುಶೀಲ್‌ ಕುಮಾರ್‌ ಮೋದಿಗೆ ಮಂಜೂರಾಯಿತು.

ಆದರೆ ತೇಜಸ್ವಿ ನಿವಾಸ ತೊರೆಯಲು ನಿರಾಕರಿಸಿದರು.ಸರ್ಕಾರಿ ಆದೇಶದ ವಿರುದ್ಧ ಹೈಕೋರ್ಟ್ ಮೊರೆ ಹೋಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.