ADVERTISEMENT

ಸುಖೇಶ್ ಚಂದ್ರಶೇಖರ್ ಪತ್ನಿ ಜಾಮೀನು ಅರ್ಜಿ ಪರಿಗಣಿಸಲು ಸುಪ್ರೀಂ ಕೋರ್ಟ್ ನಿರಾಕರಣೆ

ಪಿಟಿಐ
Published 30 ಅಕ್ಟೋಬರ್ 2023, 14:22 IST
Last Updated 30 ಅಕ್ಟೋಬರ್ 2023, 14:22 IST
   

ನವದೆಹಲಿ: ₹200 ಕೋಟಿ ಸುಲಿಗೆ ಪ್ರಕರಣದ ಆರೋಪಿ ಸುಖೇಶ್ ಚಂದ್ರಶೇಖರ್ ಅವರ ಪತ್ನಿ ಲೀನಾ ಪೌಲೋಸ್ ಅವರ ಮೇಲಿನ ಆರೋಪಗಳು ಗಂಭೀರವಾಗಿರುವುದನ್ನು ಪರಿಗಣಿಸಿದ ಸುಪ್ರೀಂ ಕೋರ್ಟ್, ಅವರ ಜಾಮೀನು ಅರ್ಜಿ ಪರಿಗಣಿಸಲು ಸೋಮವಾರ ನಿರಾಕರಿಸಿದೆ.

ನ್ಯಾಯಮೂರ್ತಿಗಳಾದ ಅನಿರುದ್ಧ ಬೋಸ್ ಮತ್ತು ಬೇಲಾ ಎಂ. ತ್ರಿವೇದಿ ಅವರಿದ್ದ ಪೀಠವು, ‘ಆರೋಪಗಳು ಸಾಕಷ್ಟು ಗಂಭೀರವಾಗಿವೆ. ದೆಹಲಿ ಹೈಕೋರ್ಟ್ ಈಗಾಗಲೇ ಈ ಅರ್ಜಿ ವಿಚಾರದಲ್ಲಿ ತನ್ನ ನಿರ್ಧಾರ ತೆಗೆದುಕೊಂಡಿದೆ. ಅರ್ಜಿ ವಿಚಾರಣೆಗೆ ಪರಿಗಣಿಸಲಾಗದು’ ಎಂದು ಹೇಳಿದೆ.

ಜುಲೈ 11 ರಂದು ದೆಹಲಿ ಹೈಕೋರ್ಟ್ ಪೌಲೋಸ್ ಅವರ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.