ADVERTISEMENT

ಮಹಾರಾಷ್ಟ್ರ ಸಚಿವ ನವಾಬ್ ಮಲಿಕ್ ಜಾಮೀನು ಮನವಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಪಿಟಿಐ
Published 22 ಏಪ್ರಿಲ್ 2022, 7:41 IST
Last Updated 22 ಏಪ್ರಿಲ್ 2022, 7:41 IST
ನವಾಬ್ ಮಲಿಕ್
ನವಾಬ್ ಮಲಿಕ್   

ನವದೆಹಲಿ: ಅಕ್ರಮ ಹಣ ವರ್ಗಾವಣೆ ಪ್ರಕರಣದ‌ಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರ ಸಚಿವ ಹಾಗೂ ಎನ್‌ಸಿಪಿ ನಾಯಕ ನವಾಬ್‌ ಮಲಿಕ್‌ ಅವರ ಜಾಮೀನು ಮನವಿಯನ್ನು ಸುಪ್ರೀಂ ಕೋರ್ಟ್‌ ತಿರಸ್ಕರಿಸಿದೆ.

ಡಿ.ವೈ. ಚಂಡ್ರಾಚೂಡ್‌ ಮತ್ತು ಸೂರ್ಯ ಕಾಂತ್‌ ಅವರಿದ್ದ ಪೀಠ, ಬಾಂಬೆ ಹೈಕೋರ್ಟ್‌ ಮಾರ್ಚ್‌ 15ರಂದು ನೀಡಿರುವ ತೀರ್ಪಿನ ವಿಚಾರದಲ್ಲಿ ಮಧ್ಯಪ್ರವೇಶಿಸುವುದಿಲ್ಲ. ಆದರೆ, ಮಲಿಕ್‌ ಅವರು ವಿಚಾರಣಾ ನ್ಯಾಯಾಲಯದ ಎದುರು ಕಾನೂನಿನ ಅಡಿಯಲ್ಲಿ ಸೌಲಭ್ಯ ಪಡೆಯಬಹುದು ಎಂದು ಹೇಳಿದೆ.

ಮಲಿಕ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಕಪಿಲ್‌ ಸಿಬಲ್,1999ರಲ್ಲಿ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ 2022ರಲ್ಲಿ ಬಂಧಿಸಲಾಗಿದೆ. ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ) ಅಡಿಯಲ್ಲಿ ಮಲಿಕ್‌ ಅವರನ್ನು ಬಂಧಿಸಲು ಅವರುಯಾವುದೇ ಅಪರಾಧವೆಸಗಿಲ್ಲ ಎಂದು ಹೇಳಿದರು.

ADVERTISEMENT

ವಾದ ಆಲಿಸಿದ ಪೀಠ,ವಿಚಾರಣೆ ಇನ್ನೂ ಆರಂಭಿಕ ಹಂತದಲ್ಲಿದೆ. ಹೀಗಾಗಿ ಹೈಕೋರ್ಟ್‌ ಆದೇಶದಲ್ಲಿ ಮಧ್ಯಪ್ರವೇಶಿಸುವುದಿಲ್ಲ ಎಂದು ಸ್ಪಷ್ಟಪಡಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.